Karnataka Chief Minister Siddaramaiah kick starts 30 day 'Nava <br />Karnataka Nirmana' Rally from Bidar. The purpose of the tour is to <br />showcase the achievements of Karnataka Congress Government during last <br />4.5 years. <br /> <br />ಮುಖ್ಯಮಂತ್ರಿ ಸಿದ್ದರಾಮಯ್ಯ 'ನವ ಕರ್ನಾಟಕ ನಿರ್ಮಾಣಕ್ಕಾಗಿ' ಹೆಸರಿನ ತಮ್ಮ <br />ರಾಜ್ಯ ಪ್ರವಾಸವನ್ನು ಬೀದರ್ ನಿಂದ ಆರಂಭಿಸಿದ್ದಾರೆ. ಇಂದು ಬೀದರ್ ನ ಬಸವ ಕಲ್ಯಾಣದಲ್ಲಿ <br />ಮಹಾರ್ಯಾಲಿ ಉದ್ದೇಶಿಸಿ ಮುಖ್ಯಮಂತ್ರಿಗಳು ಭಾಷಣ ಮಾಡಿದರು. 'ನವ ಕರ್ನಾಟಕ <br />ನಿರ್ಮಾಣಕ್ಕಾಗಿ' ಒಂದು ತಿಂಗಳ ದೀರ್ಘ ರಾಜ್ಯ ಪ್ರವಾಸವಾಗಿದ್ದು ಬೀದರ್ ನಿಂದ <br />ಆರಂಭಿಸಲಾಗಿದೆ. ಡಿಸೆಂಬರ್ 13, 2017ರಿಂದ ಜನವರಿ 13, 2018ರವರೆಗೆ ಈ ಪ್ರವಾಸ <br />ನಡೆಯಲಿದ್ದು, ಬಸ್ಸಿನಲ್ಲಿ ಸಿದ್ದರಾಮಯ್ಯ ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದಾರೆ. <br />ಬೀದರ್ ನಲ್ಲಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು ಕಳೆದ 4 ವರ್ಷಗಳಲ್ಲಿ <br />ಬೀದರ್ ಅಭಿವೃದ್ಧಿಗೆ ತಮ್ಮ ಸರಕಾರ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರ ಮುಂದೆ <br />ತೆರೆದಿಟ್ಟಿದ್ದಾರೆ.ಬೀದರ್ ಅಭಿವೃದ್ಧಿಗೆ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಸಿದ್ದರಾಮಯ್ಯ <br />ಮಾಡಿರುವ ಸರಣಿ ಟ್ವೀಟ್ ಗಳ ಮಾಹಿತಿ ಇಲ್ಲಿದೆ,ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು <br />ಬಸವ ಕಲ್ಯಾಣ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದರು.