On Gauri day in Bengaluru on Monday freedom fighter HS Doreswamy, Actor Prakash Rai and others express their angry against BJP and prime minister Narendra Modi. <br /> <br />ಗೌರಿ ಅಮರ್ ರಹೇ ಅಮರ್ ರಹೇ , ನಾನು ಗೌರಿ, ನಾನು ಗೌರಿ' ಎಂಬ ಘೋಷಣೆಗಳು ಮೊಳಗಿದವು. ಸಂವಿಧಾನ ಬೋಧನೆಯ ಪ್ರಮಾಣ ಬೋಧಿಸಲಾಯಿತು. ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಈ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ಸೋಮವಾರ ಆಯೋಜಿಸಿರುವ ಗೌರಿ ದಿನ ಸಮಾವೇಶದಲ್ಲಿ. <br /> <br />ಶಾಸಕ ಜಿಗ್ನೇಶ್ ಮೇವಾನಿ, ಕನ್ಹಯ್ಯಕುಮಾರ್, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ , ಕವಿತಾ ಲಂಕೇಶ್, ನಟ ಪ್ರಕಾಶ್ ರೈ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು, ವಿಮರ್ಶಕ ರಹಮತ್ ತರೀಕರೆ, ಬರಹಗಾರ್ತಿ ಕೆ.ನೀಲಾ ಸೇರಿದಂತೆ ಹಲವರು ಭಾಗಿಯಾದರು. <br /> <br />ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿ ಅವರು ಪ್ರಧಾನಿ ನರೇಂದ್ರ್ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. <br /> <br /> ಗೌರಿ ಲಂಕೇಶ್ ಬಗ್ಗೆ ಬರೆದಿರುವ ಪುಸ್ತಕವನ್ನು ಒಂದು ಲಕ್ಷ ರುಪಾಯಿ ಕೊಟ್ಟು ಖರೀದಿಸುತ್ತೇನೆ ಎಂದು ಪ್ರಕಾಶ್ ರೈ ಅವರು ಘೋಷಿಸಿದರು. ಈ ಸಮಾವೇಶದಲ್ಲಿ ಹಲವರು ಮಾತನಾಡಿದರು.