After Karnataka CM HD Kumarswamy's statement in which he calls for a revolt against BJP in Karnataka, many twitterians condemn him. <br /><br /> ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನೀಡಿದ 'ದಂಗೆ' ಹೇಳಿಕೆ ಅವರಿಗೇ ಮುಳುವಾಗುವ ಲಕ್ಷಣಗಳು ಕಂಡುಬರುತ್ತಿವೆ. ಅವರ ಹೇಳಿಕೆಯನ್ನು ರಾಜ್ಯದಾದ್ಯಂತ ಬಿಜೆಪಿ ಬೆಂಬಲಿಗರು ಮಾತ್ರವಲ್ಲದೆ, ಹಲವರು ವಿರೋಧಿಸಿದ್ದಾರೆ. ಒಟ್ಟಿನಲ್ಲಿ ಮಾತಿನ ಓಘದ ನಡುವಲ್ಲಿ ಅರಿವಿದ್ದೋ, ಇಲ್ಲದೆಯೋ ಮುಖ್ಯಮಂತ್ರಿಗಳ ಬಾಯಲ್ಲಿ ಬಂದ ಈ 'ದಂಗೆ' ಹೇಳಿಕೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ದಂಗೆ ಎದ್ದಿದ್ದಾರೆ.
