ನಿನ್ನೆಯಷ್ಟೇ ಪ್ರಮಾಣ ವಚನ ಸ್ವೀಕರಿಸಿ ಸಚಿವ ಸಂಪುಟ ಸೇರಿದ್ದ ಮಾಧುಸ್ವಾಮಿ ಹಾಗೂ ಸಿ.ಟಿ.ರವಿ ಇಂದು ಚಿಕ್ಕಮಗಳೂರಿನ ಪ್ರವಾಹ ಪರಿಸ್ಥಿತಿಯ ಪರಿಶೀಲನೆಗೆ ಮುಂದಾದರು. ಮೂಡಿಗೆರೆ ತಾಲೂಕಿನ ಪ್ರವಾಹ, ನೆರೆ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿ, ಬಣಕಲ್, ಬಾಳೂರು ಹೊರಟ್ಟಿ, ಮಲೆಮನೆ, ದುರ್ಗದಹಳ್ಳಿ ಗ್ರಾಮಗಳ ವೀಕ್ಷಣೆ ಮಾಡಿದರು.
