ದಾವಣಗೆರೆ ಸೀಲ್ಡೌನ್ ಪ್ರದೇಶದಲ್ಲಿರುವ ನಾಗರೀಕರಿಗೆ ಅಗತ್ಯ ವಸ್ತುಗಳ ವ್ಯವಸ್ಥೆ ಮಾಡುವಲ್ಲಿ ದಾವಣಗೆರೆ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮುಂದಾಗುತ್ತಿಲ್ಲ ಎಂದು ಆರೋಪಿಸಿ ಅಲ್ಲಿನ ನಾಗರೀಕರು ಪ್ರತಿಭಟನೆ ನಡೆಸಿದ್ದಾರೆ.<br />ಸೀಲ್ಡೌನ್ ಪ್ರದೇಶದಲ್ಲಿ ಅಗತ್ಯ ವಸ್ತುಗಳಿಗೆ ಜನರ ಪರದಾಡುತ್ತಿದ್ದಾರೆ. ಇಲ್ಲಿನ ಎಸ್ಪಿಎಸ್ ನಗರದ 2ನೇ ಹಂತದಲ್ಲಿ ಕಳೆದ 4 ದಿನದಿಂದ ಹಾಲು, ತರಕಾರಿ, ಆಹಾರ ಸಾಮಾಗ್ರಿಗಳು ದೊರೆಯುತ್ತಿಲ್ಲ. ಹೊರಗಡೆ ಸಂಚರಿಸಲೂ ಬಿಡುತ್ತಿಲ್ಲ. ಅಗತ್ಯ ವಸ್ತುಗಳಿಲ್ಲದೇ ವಯೋವೃದ್ದರು ಹಾಗೂ ಮಕ್ಕಳು ಪರದಾಡುತ್ತಿದ್ದಾರೆ. ಮಕ್ಕಳಿಗೆ ಕುಡಿಯಲು ಹಾಲು ಸಿಗದ ಪರಿಸ್ಥಿತಿ ಈ ಭಾಗದಲ್ಲಿದೆ ನಮಗೆ ಅಗತ್ಯ ವಸ್ತುಗಳನ್ನು ನೀಡಿ ಇಲ್ಲವಾದರೆ ಲಾಕ್ಡೌನ್ ತೆರವು ಮಾಡಿ ದುಡಿಯಲು ಹೊರಗೆ ಬಿಡಬೇಕೆಂದು ತಮ್ಮ ಅಸಹಾಯಕತೆ ತೊಡಿಕೊಂಡಿದ್ದಾರೆ.