ಹ್ಯುಂಡೈ ಇಂಡಿಯಾ ಕಂಪನಿಯು ಹ್ಯುಂಡೈ ಕೇರ್ಸ್ 3.0 ಹೆಸರಿನ ಹೊಸ ಪರಿಹಾರ ಕ್ರಮಗಳನ್ನು ಘೋಷಿಸಿದೆ. ಈ ಹೊಸ ಪರಿಹಾರ ಕ್ರಮವು ಕರೋನಾ ವೈರಸ್ ಮಹಾಮಾರಿಯಿಂದ ಹೆಚ್ಚು ಭಾದಿತವಾಗಿರುವ ಮಹಾರಾಷ್ಟ್ರ, ದೆಹಲಿ, ಹರಿಯಾಣ, ತೆಲಂಗಾಣ ಹಾಗೂ ತಮಿಳುನಾಡು ರಾಜ್ಯಗಳಿಗೆ ನೆರವು ನೀಡಲಿದೆ.<br /><br />ಹ್ಯುಂಡೈ ಕೇರ್ಸ್ 3.0 ಅಡಿಯಲ್ಲಿ ಹ್ಯುಂಡೈ ಕಂಪನಿಯು ರೂ.20 ಕೋಟಿಗಳ ಪ್ಯಾಕೇಜ್ ಘೋಷಿಸಿದೆ. ಇದರ ಅಡಿಯಲ್ಲಿ ಕಂಪನಿಯು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದಿಸುವ ಘಟಕಗಳನ್ನು ಸ್ಥಾಪಿಸಲಿದೆ. <br /><br />ದೇಶದಲ್ಲಿ ಕೋವಿಡ್ -19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಎದುರಾಗಿದೆ. ಹ್ಯುಂಡೈ ಕಂಪನಿಯು ಸ್ಥಾಪಿಸಲಿರುವ ಆಮ್ಲಜನಕ ಉತ್ಪಾದನಾ ಘಟಕಗಳು ಆಮ್ಲಜನಕದ ಕೊರತೆಯನ್ನು ನೀಗಿಸಲಿವೆ.
