Kiccha Sudeep Donates 2.5 Lakh To The Kin Of His Die Hard Fan<br /><br /> ಕಿಚ್ಚ ಸುದೀಪ್ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಭಿಮಾನಿಗಾಗಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.<br /><br />ಕಿಚ್ಚ ಸುದೀಪ್ ಅಭಿಮಾನಿ ಸಂಘದ ತುಮಕೂರು ಜಿಲ್ಲಾ ಮಾಜಿ ಉಪಾಧ್ಯಕ್ಷರಾಗಿದ್ದ ಪುನೀತ್ ಶನಿವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ವಿಷಯ ತಿಳಿದ ಕಿಚ್ಚ ಸುದೀಪ್ ಅವರು ತಮ್ಮ ಅಭಿಮಾನಿಯ ಬಗ್ಗೆ ಟ್ವೀಟ್ ಮಾಡಿದ್ದಾರೆ<br /><br />ಟ್ವೀಟ್ನಲ್ಲಿ ಏನಿದೆ?<br />ಪುನೀತ್ ಆರ್ಯ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಈ ಅದ್ಭುತ ಆತ್ಮ ಇನ್ನಿಲ್ಲ ಎಂದು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಲವು ವರ್ಷಗಳಿಂದ ಪುನೀತ್ ನನ್ನ ಅಭಿಮಾನಿ ಹಾಗೂ ಸಹೋದರರಾಗಿದ್ದರು. ಬಹಳ ಬೇಸರವಾಗುತ್ತಿದೆ. ನಾನು ಪುನೀತ್ರನ್ನು ಮಿಸ್ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಳ್ಳುವ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.<br /><br />Very disheartening n unable to accept tat this Wondeful soul is no more..<br /><br />He's been a fan n a brother to me for years. Very very sad. <br />He Wil be missed.<br /><br />ಆಗಿದ್ದೇನು?<br />ಶನಿವಾರ ರಾತ್ರಿ ತುಮಕೂರಿನ ಹನುಮಂತಪುರದ ಪಂಜಾಬಿ ಡಾಬಾ ಬಳಿ ಪು-ನೀತ್ ಬೈಕ್ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿತ್ತು. ಅಪಘಾತ ಬಳಿಕ ಪುನೀತ್ ಇಬ್ಬರು ಸ್ನೇಹಿತರಿಗೆ ಫೋನ್ ಮಾಡಿದ್ದರು. ಆದರೆ ತಡರಾತ್ರಿಯಾಗಿದ್ದರಿಂದ ಇಬ್ಬರು ಸ್ನೇಹಿತರು ಫೋನ್ ರಿಸೀವ್ ಮಾಡಿಲ್ಲ. ಕೊನೆಗೆ ಅಪಘಾತದಲ್ಲಿ ತೀವ್ರ ರಕ್ತ ಸ್ರಾವದಿಂದ ನಿತ್ರಾಣಗೊಂಡು ಸ್ಥಳದಲ್ಲೇ ಪುನೀತ್ ಮೃತಪಟ್ಟಿದ್ದರು.<br /><br /><br />For latest updates on film news subscribe our channel.<br /><br />Subscribe on YouTube: www.youtube.com/publicmusictv<br />Like us @ https://www.facebook.com/publicmusictv<br />Follow us @ https://twitter.com/publicmusictv