ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಿಸಿದ ಪ್ರಧಾನಿ ಮೋದಿ<br /><br />ದೆಹಲಿ: ಕೇಂದ್ರ ಸರ್ಕಾರ ರೂಪಿಸಿದ್ದ ವಿವಾದಕ್ಕೆ ಕಾರಣವಾಗಿದ್ದ ಮುರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. <br /><br />ದೆಹಲಿ ಗಡಿ ಸೇರಿದಂತೆ ದೇಶದ ವಿವಿಧೆಡೆ ಕೋಟ್ಯಂತರ ಜನ ಭಾಗವಹಿಸಿ ಕೇಂದ್ರದ ವಿರುದ್ಧ ಹೋರಾಡಿದ್ದ ರೈತ ಸಂಘಟನೆಗಳಿಗೆ ಈ ಮೂಲಕ ಜಯ ಸಿಕ್ಕಂತಾಗಿದೆ. <br /><br />ಇಂದು ಗುರುನಾನಕ್ ಜಯಂತಿ ಸಂದರ್ಭದಲ್ಲಿ ದೇಶವನ್ನು ಉದ್ದೇಶಿಸಿ ಬೆಳಗ್ಗೆ 9 ಗಂಟೆಗೆ ಮಾತಾಡಿದ , ಅವರು ತಮ್ಮ ಸರ್ಕಾರ ರೈತರ ಹಿತಕ್ಕಾಗಿ ಯಾವೆಲ್ಲಾ ಯೋಜನೆಗಳನ್ನು ಜಾರಿಗೆ ತಂದಿದೆ, ರೈತ ಕಾರ್ಯಕ್ರಮಗಳ ಬಜೆಟ್ ಅನ್ನು ಎಷ್ಟಕ್ಕೆ ಏರಿಸಿದೆ ಎಂದು ವಿವರಿಸಿ, ನಂತರ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಹೇಳಿದರು. <br /><br />ನವೆಂಬರ್ 26 2020ರಂದು ರೈತರು ಆರಂಭಿಸಿದ್ದ ಹೋರಾಟದಲ್ಲಿ ಇದುವರೆಗೆ 650ಕ್ಕೂ ಹೆಚ್ಚು ರೈತರು ಬಲಿಯಾಗಿದ್ದರು. ಮೋದಿಯವರು ನಿರ್ಧಾರ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ವ್ಯಕ್ತವಾಗಿದ್ದು, ಕೊನೆಗೂ ರೈತ ಹೋರಾಟಕ್ಕೆ ಮಣಿದ ಒಕ್ಕೂಟ ಸರ್ಕಾರ: ಚಾರಿತ್ರಿಕ ರೈತ ಹೋರಾಟಕ್ಕೆ ಜಯ, ರೈತರಿಗೆ ಕ್ಷಮೆ ಯಾಚಿಸಿ ಕೃಷಿ ಕಾನೂನುಗಳನ್ನು ರದ್ದುಪಡಿಸಿದ ಮೋದಿ ಎಂಬ ಪೋಸ್ಟ್ ಗಳು ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ.<br /><br /><br /><br />video credit @Narendra Modi