Surprise Me!

Heavy Rain Lashes Sevreal Districts In Karnataka | Public TV

2022-06-06 4 Dailymotion

Heavy Rain Lashes Sevreal Districts In Karnataka | Public TV <br /><br />ರಾಜ್ಯದ ಕೆಲವೆಡೆ ಭಾನುವಾರ ಭಾರೀ ವರ್ಷಧಾರೆಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಳೆರಾಜ ಅವಾಂತರ ಸೃಷ್ಟಿಸಿದ್ದಾನೆ. ಸಿಡಿಲಿಗೆ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ. ಅಲ್ಲಲ್ಲಿ ಜನಸಂಚಾರ ಅಸ್ತವ್ಯಸ್ತವಾಗಿದೆ. <br /><br />ರಾಜ್ಯದ ಹಲವೆಡೆ ಮುಂಗಾರು ಆರ್ಭಟಿಸುತ್ತಿದೆ. ಸಂಜೆಯಿಂದಲೇ ಶುರುವಾದ ಮಳೆ ರಾತ್ರಿವೇಳೆಗೆ ಜೋರಾಗಿತ್ತು. ಭಾರೀ ಗಾಳಿ, ಗುಡುಗು-ಸಿಡಿಲಿನ ಸಮೇತ ಸುರಿದ ಮಳೆಗೆ ರಾಜ್ಯದ ಹಲವೆಡೆ ತತ್ತರಿಸುವಂತೆ ಮಾಡಿದೆ.<br /><br />ಕೊಪ್ಪಳ ಜಿಲ್ಲಾದ್ಯಂತ ಗುಡುಗು- ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಜಿಲ್ಲೆಯ ಯಲಬುರ್ಗಾ ತಾಲೂಕು ಚಿಕ್ಕ ಮ್ಯಾಗೇರಿ ಗ್ರಾಮದ ಇಬ್ಬರು ಮಹಿಳೆಯರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ.<br /><br />ಕೋಟೆನಾಡು ಚಿತ್ರದುರ್ಗದಲ್ಲೂ ಮಳೆ ಆಗಿದ್ದು.. ಚಳ್ಳಕೆರೆಯ ನೆಹರು ವೃತ್ತದ ಜಲಾವೃತವಾಗಿತ್ತು. ಅಲ್ಲದೇ ಗಾಳಿ, ಮಳೆಗೆ ತಗಡಿನ ಸೀಟು ನೆಲಕ್ಕುರುಳಿವೆ. ರಸ್ತೆ ಬದಿ ನಿಲ್ಲಿಸಿದ್ದ ಬೈಕ್‌ಗಳು ಮತ್ತು ಆಟೋಗಳು ಜಖಂ ಆಗಿದೆ.<br /><br />ಕೋಲಾರ ಜಿಲ್ಲೆಯ ಮುಳಬಾಗಲು, ಶ್ರೀನಿವಾಸಪುರ, ಕೆಜಿಎಫ್, ಕೋಲಾರ ತಾಲ್ಲೂಕಿನ ಹಲವೆಡೆ ಮಳೆರಾಯ ಅಬ್ಬರಿಸಿದ್ದಾನೆ. <br /><br />ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮದಹಳ್ಳಿಯಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಮನೆ ಹಾಗೂ ಕೊಟ್ಟಿಗೆಯ ಮೇಲ್ಛಾವಣಿಗಳು ಹಾರಿ ಹೋಗಿದೆ.<br /><br />ಇನ್ನು ಗದಗ ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಬಳಿ ಮಳೆ ಬಂದ ಹಿನ್ನೆಲೆ ಜಮೀನಿನಲ್ಲಿ ಮರದ ಕೆಳಗೆ ನಿಂತಿದ್ದ ಮೂವರು ಯುವಕರಿಗೆ ಸಿಡಿಲು ಬಡಿದು ಗಾಯಗಳಾಗಿದೆ. ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.<br /><br />ಇನ್ನೂ ಬೆಂಗಳೂರಿನಲ್ಲೂ ರಾತ್ರಿ ಮಳೆ ಅಬ್ಬರಿಸಿದೆ. ಮೆಜೆಸ್ಟಿಕ್, ಮಲ್ಲೇಶ್ವರಂ, ಸದಾಶಿವನಗರ, ಹೆಬ್ಬಾಳ, ಯಲಹಂಕ, ಯಶವಂತಪುರ, ಶೇಷಾದ್ರಿಪುರಂ, ಕೆ.ಆರ್ ಮಾರ್ಕೆಟ್ ಸೇರಿದಂತೆ ಏರ್‌ಪೋರ್ಟ್ ಬಳಿ ಭಾರಿ ಮಳೆ ಆಗಿದೆ. ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡುವಂತಾಗಿತ್ತು.<br /><br />ಭಾರೀ ಗಾಳಿ ಸಮೇತ ಸುರಿದ ಮಳೆಗೆ ಏರ್‌ಪೋರ್ಟ್ನಲ್ಲಿದ್ದ ತಡೆಗೋಡೆಗಳು ಚೆಲ್ಲಾಪಿಲ್ಲಿ ಆಗಿದೆ. <br /><br />ಮುಂಗಾರು ಆರಂಭದಲ್ಲೇ ಅಬ್ಬರಿಸುತ್ತಿದ್ದು.. ಮುಂದಿನ ದಿನಗಳಲ್ಲಿ ಮತ್ತಷ್ಟು ಅವಾಂತರಗಳು ಕಟ್ಟಿಟ್ಟಬುತ್ತಿ..<br /><br />

Buy Now on CodeCanyon