<p>ಯಲ್ಲಾಪುರ (ಉತ್ತರ ಕನ್ನಡ): ಯಲ್ಲಾಪುರ ತಾಲೂಕಿನ ಅರೆಬೈಲ್ ಜಲಪಾತದಲ್ಲಿ ಸಿಲುಕಿಕೊಂಡಿದ್ದ ಮೂವರು ಪ್ರವಾಸಿಗರನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಿಸಿದ್ದಾರೆ. </p><p>ಯುವಕರ ಗುಂಪು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿರುವ ಅರೆಬೈಲ್ ಜಲಪಾತಕ್ಕೆ ಕಳೆದ ಭಾನುವಾರ ತೆರಳಿತ್ತು. ಆದರೆ ಜಲಪಾತದಲ್ಲಿ ಏಕಾಏಕಿ ನೀರಿನ ಮಟ್ಟ ಏರಿಕೆಯಾದ ಕಾರಣ ಸಿಲುಕಿಕೊಂಡಿದ್ದರು. ಈ ಘಟನೆ ಕಳೆದ ವಾರ ನಡೆದಿದ್ದು, ವಿಡಿಯೋ ವೈರಲ್ ಆದ ನಂತರ ತಡವಾಗಿ ಬೆಳಕಿಗೆ ಬಂದಿದೆ.</p><p>ಹುಬ್ಬಳ್ಳಿಯಿಂದ ಉತ್ತರಕನ್ನಡ ಪ್ರವಾಸಕ್ಕೆ ಬಂದಿದ್ದ ಖಾಸಗಿ ಮೆಡಿಕಲ್ ಕಾಲೇಜಿನ ಐವರು ವಿದ್ಯಾರ್ಥಿಗಳು ಅರೆಬೈಲ್ ಘಟ್ಟದ ಕಾಡಿನ ಮಧ್ಯದಲ್ಲಿರುವ ಅರೆಬೈಲ್ ಫಾಲ್ಸ್ಗೆ ತೆರಳಿದ್ದರು. ಜಲಪಾತದ ಸಮೀಪದ ಚಿಕ್ಕ ಹಳ್ಳವನ್ನು ದಾಟುತ್ತಿದ್ದಾಗ ದಿಢೀರ್ ನೀರಿನ ಪ್ರಮಾಣ ಹೆಚ್ಚಾದ್ದರಿಂದ ಮೂವರು ವಿದ್ಯಾರ್ಥಿಗಳು ಹಳ್ಳದ ಮಧ್ಯದಲ್ಲೇ ಸಿಲುಕಿಕೊಂಡರು.</p><p>ಸಕಾಲಕ್ಕೆ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಯಲ್ಲಾಪುರ ಠಾಣಾ ಪೊಲೀಸರು, ನೀರಿನ ಪ್ರಮಾಣ ಸ್ವಲ್ಪ ಇಳಿಕೆಯಾಗುತ್ತಿದ್ದಂತೆ, ರಕ್ಷಣಾ ಕಾರ್ಯಾಚರಣೆ ನಡೆಸಿ ಸಿಲುಕಿಕೊಂಡಿದ್ದ ಮೂವರನ್ನು ಸುರಕ್ಷಿತವಾಗಿ ಕರೆತಂದರು.ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.</p><p>ಇದನ್ನೂ ಓದಿ: ಭಟ್ಕಳ: ಹೆದ್ದಾರಿಯಲ್ಲಿ ಉರುಳಿದ ಬೃಹತ್ ಮರ; ಟ್ಯಾಂಕರ್, ಬೈಕ್ ಸವಾರರು ಜಸ್ಟ್ ಮಿಸ್...WATCH VIDEO</a></p>