Surprise Me!

ಕುಟುಂಬ ಸಮೇತ ಅಂಜನಾದ್ರಿಗೆ ಭೇಟಿ ನೀಡಿದ ರಾಜ್ಯಪಾಲ ಗೆಹ್ಲೋಟ್

2025-08-06 60 Dailymotion

<p>ಗಂಗಾವತಿ (ಕೊಪ್ಪಳ): ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್ ಅವರು ತಮ್ಮ ಕುಟುಂಬ ಸಮೇತ ಗಂಗಾವತಿ ತಾಲೂಕಿನ ಚಿಕ್ಕರಾಂಪೂರದ ಬಳಿ ಇರುವ ಅಂಜನಾದ್ರಿ ದೇಗುಲಕ್ಕೆ ಬುಧವಾರ ಭೇಟಿ ನೀಡಿದರು. ಹನುಮಂತ ದೇವರ ದರ್ಶನ ಪಡೆದ ಅವರು, ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.</p><p>ಇದಕ್ಕೂ ಮೊದಲು ಪಾದಗಟ್ಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಾಜ್ಯಪಾಲರು, ಬಳಿಕ ಅಲ್ಲಿಂದ 575 ಮೆಟ್ಟಿಲುಗಳನ್ನು ಹತ್ತುವ ಮೂಲಕ ಗಮನ ಸೆಳೆದರು. ವಯಸ್ಸು 77 ಆದರೂ ರಾಜ್ಯಪಾಲರು ಹುಮ್ಮಸ್ಸಿನಿಂದಲೇ ತಮ್ಮ ಕುಟುಂಬ ಸದಸ್ಯರೊಂದಿಗೆ ಬೆಟ್ಟ ಹತ್ತಿದರು.</p><p>ಬೆಟ್ಟದ ಮೇಲಿನ ದೇಗುಲದಲ್ಲಿ ಪೂಜೆ ಸಲ್ಲಿಸಿ, ಬಳಿಕ ಬೆಟ್ಟದ ಮೇಲಿಂದ ಕಾಣುವ ಹಂಪೆಯ ಸುಂದರ ದೃಶ್ಯ ಹಾಗೂ ಬೆಟ್ಟಗುಡ್ಡಗಳ ಸಾಲಿನಲ್ಲಿ ಹರಿಯುವ ತುಂಗಭದ್ರಾ ನದಿಯನ್ನು ಕಣ್ತುಂಬಿಕೊಂಡರು. </p><p>ರಾಜ್ಯಪಾಲರಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ದೇಗುಲದಿಂದ ಶಾಲು ಹೊದಿಸಿ ಗೌರವಿಸಲಾಯಿತು. ರಾಜ್ಯಪಾಲರೊಂದಿಗೆ ಅವರ ಪತ್ನಿ, ಮಕ್ಕಳು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಒಟ್ಟು 40 ಸದಸ್ಯರು ಇದ್ದರು.</p><p>ಜಿಲ್ಲಾಧಿಕಾರಿ ಸುರೇಶ್​ ಇಟ್ನಾಳ್, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ, ಸಹಾಯಕ ಆಯುಕ್ತ ಮಹೇಶ್​ ಮಾಲಗತ್ತಿ, ಅರಸಿದ್ಧಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್., ದೇಗುಲದ ಆಡಳಿತಾಧಿಕಾರಿ ಪ್ರಕಾಶ್ ರಾವ್, ತಹಶಿಲ್ದಾರ್ ರವಿ ಅಂಗಡಿ ಸೇರಿದಂತೆ ತಾಲೂಕು ಹಂತದ ಅಧಿಕಾರಿಗಳಿದ್ದರು.</p><p>ಇದನ್ನೂ ನೋಡಿ: ಬೆಳ್ತಂಗಡಿ: ಶಿಶಿಲ ದೇವಸ್ಥಾನ ಜಲಾವೃತ, ಕಾರನ್ನು ಹಗ್ಗದಿಂದ ಮರಕ್ಕೆ ಕಟ್ಟಿದ ಸ್ಥಳೀಯರು</a></p>

Buy Now on CodeCanyon