Surprise Me!

ಹಿಂದೂ-ಮುಸ್ಲಿಂ ಭಾವೈಕ್ಯತೆಯ ಗಣೇಶನಿಗೆ ಅದ್ಧೂರಿ ಮೆರವಣಿಗೆ: ಕೈಕೈ ಹಿಡಿದು ಕುಣಿದು ಕುಪ್ಪಳಿಸಿ ಗಣಪನ ನಿಮಜ್ಜನ

2025-09-05 19 Dailymotion

<p>ಕಾರವಾರ(ಉತ್ತರ ಕನ್ನಡ): ಹಿಂದೂ, ಮುಸ್ಲಿಂ ಭಾವೈಕ್ಯತೆಗೆ ಹೆಸರಾದ ಕಾರವಾರ ನಗರದ ಕೋಣೆವಾಡದ ಗಣೇಶನ ಮೂರ್ತಿಯನ್ನು ಗುರುವಾರ ಬೃಹತ್ ಮೆರವಣಿಗೆ ಮೂಲಕ ನಿಮಜ್ಜನ ಮಾಡಲಾಯಿತು. </p><p>ಸಂಜೆಯ ವೇಳೆಗೆ ಹಿಂದೂ ಹಾಗೂ ಮುಸ್ಲಿಂ ಬಾಂಧವರು ಒಟ್ಟಾಗಿ ಗಣಪತಿ ಮೆರವಣಿಗೆಯನ್ನು ಸಜ್ಜುಗೊಳಿಸಿದರು. ಕೋಣೆವಾಡದ ಎಲ್ಲಾ ಸಮುದಾಯದ ಯುವಕರು, ಯುವತಿಯರು ಒಂದೇ ಬಣ್ಣದ ವಸ್ತ್ರ ಧರಿಸಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಬಣ್ಣ, ಬಣ್ಣದ ವಿದ್ಯುತ್​​ ದೀಪಾಲಂಕಾರ ಹಾಗೂ ಧ್ವನಿವರ್ಧಕದ ಮೂಲಕ ಮೆರವಣಿಗೆಯು ಸಾಗಿತು.</p><p>ದಾರಿಯುದ್ದಕ್ಕೂ ಹಿಂದೂ ಹಾಗೂ ಮುಸ್ಲಿಂ ಯುವಕರು ಕೈ-ಕೈ ಹಿಡಿದುಕೊಂಡು ಹಾಡಿಗೆ ಹೆಜ್ಜೆ ಹಾಕಿದರು. ನಗರದ ಮುಖ್ಯ ರಸ್ತೆಗಳಲ್ಲಿ ಸಾಗಿದ ಮೆರವಣಿಗೆಗೆ ಸಣ್ಣ ಮಳೆಯು ಅಡ್ಡಿಯಾದರೂ ಸಾಂಗವಾಗಿ ಸಾಗಿತು. ಬಳಿಕ ಟ್ಯಾಗೋರ್​​​ ಕಡಲ ತೀರದಲ್ಲಿ ಗಣೇಶನ ಮೂರ್ತಿಗೆ ಪೂಜೆ ಸಲ್ಲಿಸಿ, ನಿಮಜ್ಜನ ನೆರವೇರಿಸಲಾಯಿತು.</p><p>ಈ ಬಾರಿ 25ನೇ ವರ್ಷದ ಗಣೇಶ ಮೂರ್ತಿಯನ್ನು ನಗರದ ಕೋಣೆವಾಡದಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಇಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷರು ಹಾಗೂ ಕೆಲ ಸದಸ್ಯರು ಮುಸ್ಲಿಂ ಸಮುದಾಯದವರೇ ಆಗಿದ್ದು, ಈ ಸಲವೂ ಅದ್ಧೂರಿಯಾಗಿ ಗಣೇಶೋತ್ಸವ ಆಚರಿಸಿ ಭಾವೈಕ್ಯತೆ ಮೆರೆದರು.</p><p>ಇದನ್ನೂ ಓದಿ: ವಿನಾಯಕನ ಬರಮಾಡಿಕೊಳ್ಳುವ ಮುಸ್ಲಿಮರು, ಈದ್ ಮಿಲಾದ್ ಮೆರವಣಿಗೆಯಲ್ಲಿ ಹಿಂದೂಗಳು</a></p>

Buy Now on CodeCanyon