Surprise Me!

ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವುದರಲ್ಲಿ ತಪ್ಪೇನಿದೆ : ವಾಟಾಳ್ ನಾಗರಾಜ್ ಪ್ರಶ್ನೆ

2025-09-08 19 Dailymotion

<p>ಮೈಸೂರು : ದಸರಾ ಮಹೋತ್ಸವ ಅರ್ಥಪೂರ್ಣವಾಗಿ ಆಗಬೇಕು, ಯುವ ದಸರಾ ದೊಂಬಿ ಆಗಬಾರದು, ಸರ್ಕಾರ, ಪಕ್ಷದ ದಸರಾವಾಗದೇ, ಸರ್ವಜನಾಂಗದ ದಸರಾ ಆಗಬೇಕು ಎಂದು ಒತ್ತಾಯಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸೋಮವಾರ ಹಾರ್ಡಿಂಗ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.</p><p>ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ವಾಟಾಳ್ ನಾಗರಾಜ್, ದಸರಾ ಉದ್ಘಾಟನೆ ಮಾಡುತ್ತಿರುವುದು ಓರ್ವ ಮಹಿಳೆ, ಈ ಕಾರಣಕ್ಕೆ ಸುಮಾರು ಒಂದೂವರೆ ತಿಂಗಳಿಂದ ದಾಳಿ ಮಾಡುತ್ತಿದ್ದಾರೆ, ಹಿಂಸೆ, ದಬ್ಬಾಳಿಕೆ ನಡೆಯುತ್ತಿದೆ. ಅವರೇ ಉದ್ಘಾಟನೆ ಮಾಡಲಿ, ಅವರು ದಸರಾ ಉದ್ಘಾಟನೆ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. </p><p>ಕನ್ನಡದ ಬಾವುಟದ ಬಗ್ಗೆ ಅವರಿಗೆ ಖಂಡಿತವಾಗಿಯೂ ಗೊತ್ತಿಲ್ಲ. ಗೊತ್ತಿದ್ದರೆ ಮಾತನಾಡುತ್ತಿರಲಿಲ್ಲ. ಕನ್ನಡ ಬಾವುಟಕ್ಕೆ ಅನ್ಯಾಯ ಆಗುತ್ತಿದೆ ಎಂದು ಬಿಜೆಪಿ, ಆರ್‌ಎಸ್‌ಎಸ್​ನವರು ಹೇಳುತ್ತಾರೆ. ಬಿಜೆಪಿ, ಆರ್‌ಎಸ್ಎಸ್​​ನವರು ಯಾವತ್ತಾದರೂ ಕನ್ನಡಕ್ಕಾಗಿ ಹೋರಾಟ ಮಾಡಿದ್ದಾರಾ? ಜೈಲಿಗೆ ಹೋಗಿದ್ದಾರಾ? ಇಡೀ ರಾಜ್ಯದಲ್ಲಿ ಹಿಂದಿ ಬೇಡವೇ ಬೇಡ ಎಂದು ಮಾತನಾಡಲಿ. ಇವರೇನು ಕನ್ನಡವನ್ನು ಉದ್ದಾರ ಮಾಡುತ್ತಾರಾ ಎಂದು ಕಿಡಿಕಾರಿದರು.</p><p>ಓರ್ವ ಮಹಿಳೆಯರು ದಸರಾ ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಚಾರ. ಇತ್ತೀಚಿನ ವಿದ್ಯಮಾನಗಳನ್ನು ನೋಡಿದರೆ ನನಗೆ ನೋವಾಗುತ್ತದೆ. ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದನ್ನು ನಾನು ಸ್ವಾಗತಿಸುತ್ತೇನೆ ಎಂದರು.</p><p>ಇದನ್ನೂ ಓದಿ : ಬಾನು ಮುಷ್ತಾಕ್ ಮುಸ್ಲಿಂ ಅಂತ ದಸರಾ ಉದ್ಘಾಟನೆಗೆ ವಿರೋಧ ಮಾಡುತ್ತಿಲ್ಲ: ಪ್ರತಾಪ್ ಸಿಂಹ</a></p>

Buy Now on CodeCanyon