Surprise Me!

ಭಕ್ತರ ಜೊತೆ ಪಾದಯಾತ್ರೆ: ಶಿಡ್ಲು ಮಲ್ಲಿಕಾರ್ಜುನಸ್ವಾಮಿಯ ದರ್ಶನ ಪಡೆದ ಸಂಸದ ಯದುವೀರ್

2025-10-21 13 Dailymotion

<p>ಮೈಸೂರು: ದೀಪಾವಳಿ ಅಮಾವಾಸ್ಯೆ ಸಂದರ್ಭದಲ್ಲಿ ಐತಿಹಾಸಿಕ ಪಿರಿಯಾಪಟ್ಟಣ ಮಲ್ಲಿಕಾರ್ಜುನಸ್ವಾಮಿ ಬೆಟ್ಟ ದೇವರ ದರ್ಶನ ಪಡೆದಿದ್ದು ಧನ್ಯತಾ ಭಾವ ಮೂಡಿಸಿತು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. </p><p>ಭಕ್ತರೊಂದಿಗೆ ಇಂದು ಪಾದಯಾತ್ರೆ ಮೂಲಕ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿರುವ ಐತಿಹಾಸಿಕ ಶ್ರೀ ಶಿಡ್ಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟ ಹತ್ತಿದ ಸಂಸದರು, ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.</p><p>ನಂತರ ಸುದ್ದಿಗಾರರ ಜೊತೆ ಮಾತನಾಡಿದ ಯದುವೀರ್, ನಮ್ಮ ಕ್ಷೇತ್ರದ ಸಾವಿರಾರು ಭಕ್ತರೊಂದಿಗೆ ಪಾದಯಾತ್ರೆ ಕೈಗೊಂಡು, ಸ್ವಾಮಿಯ ದರ್ಶನ ಪಡೆದಿದ್ದು ವಿಶೇಷ ಅನುಭೂತಿ ನೀಡಿತು. ಈ ಬೆಳಕಿನ ಹಬ್ಬ ದೀಪಾವಳಿ ನಾಡಿನ ಪ್ರತಿಯೊಬ್ಬರಿಗೂ ಸುಖ, ಶಾಂತಿ, ಸಮೃದ್ಧಿ ತರಲಿ. ನಾಡು ಸದಾ ಸುಭಿಕ್ಷವಾಗಿರಲಿ ಎಂದು ತಿಳಿಸಿದರು.</p><p>ಬೆಟ್ಟ ಅಭಿವೃದ್ಧಿಪಡಿಸಲು ಸಂಕಲ್ಪ: ಸಾವಿರಾರು ಭಕ್ತರು ಈ ಐತಿಹಾಸಿಕ ಬೆಟ್ಟದೊಂದಿಗೆ ಧಾರ್ಮಿಕ ಭಾವನೆ ಬೆಸೆದುಕೊಂಡಿದ್ದಾರೆ. ಈ ಬೆಟ್ಟವನ್ನು ಅಭಿವೃದ್ಧಿಪಡಿಸಲು ಇದೇ ಸಂದರ್ಭದಲ್ಲಿ ಸಂಕಲ್ಪ ತೊಡುತ್ತೇನೆ ಎಂದು ಯದುವೀರ್ ಭರವಸೆ ನೀಡಿದರು.</p><p>ರಾಜ್ಯ ಸರ್ಕಾರವು ಈ ಬೆಟ್ಟವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಇದರಿಂದ ಭಕ್ತರು ಬೇಸರಗೊಂಡಿದ್ದಾರೆ. ಪಾದಯಾತ್ರೆ ವೇಳೆ ಕೆಲವು ಭಕ್ತರು ಅಳಲು ತೋಡಿಕೊಂಡಿದ್ದಾರೆ‌. ರಾಜ್ಯ ಸರ್ಕಾರ‌ ಮಾಡಿರುವ ಪ್ರಮಾದವನ್ನು ಸರಿಪಡಿಸಲಾಗುವುದು. ಶಿಡ್ಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟವನ್ನು ಅಭಿವೃದ್ದಿಪಡಿಸಲು ಬದ್ಧನಾಗಿದ್ದೇನೆ ಎಂದು ಭರವಸೆ ನೀಡಿದರು. </p><p>ಇದನ್ನೂ ಓದಿ: ಬಲಿಪಾಡ್ಯಮಿಯಂದು ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಸೂಚನೆ</a></p>

Buy Now on CodeCanyon