<p>ದಾವಣಗೆರೆ: ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದು, ಆಟೋದಲ್ಲಿದ್ದ ದಂಪತಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆಯ ಪಿ.ಬಿ.ರಸ್ತೆಯಲ್ಲಿ ನಡೆದಿದೆ. ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p><p>ನವೆಂಬರ್ 8ರ ರಾತ್ರಿ ದಾವಣಗೆರೆಯ ಪಿ.ಬಿ.ರಸ್ತೆಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಪಲ್ಟಿಯಾಗಿದೆ. ಆಟೋದಲ್ಲಿದ್ದ ಮಗು ಮತ್ತೊಂದು ಬದಿಯ ರಸ್ತೆಗೆ ಹಾರಿ ಬಿದ್ದಿದೆ. </p><p>ಕಾರು ಹಾಗೂ ಆಟೋ ಚಾಲಕರಿಬ್ಬರೂ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ದಾವಣಗೆರೆ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p><p>ನವೆಂಬರ್ 8ರ ರಾತ್ರಿ ದಾವಣಗೆರೆಯ ಪಿ.ಬಿ.ರಸ್ತೆಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಪಲ್ಟಿಯಾಗಿದೆ. ಆಟೋದಲ್ಲಿದ್ದ ಮಗು ಮತ್ತೊಂದು ಬದಿಯ ರಸ್ತೆಗೆ ಹಾರಿ ಬಿದ್ದಿದೆ.</p><p>ಹಾಸನದಲ್ಲಿ ಗೂಡಂಗಡಿಗೆ ನುಗ್ಗಿದ ಕಾರು: ಹಳೇ ರಾಷ್ಟ್ರೀಯ ಹೆದ್ದಾರಿ 75ರ ಬಾಳೆಗದ್ದೆ ಬಡಾವಣೆಯಲ್ಲಿರುವ ಕುಬೇರ ಹೋಟೆಲ್ ಸಮೀಪ ತಿರುವು ಪಡೆಯುತ್ತಿದ್ದ ಕಾರಿಗೆ KSRTC ಬಸ್ ಡಿಕ್ಕಿ ಹೊಡೆದು, ಕಾರು ರಸ್ತೆ ಬದಿಯ ತರಕಾರಿ ಅಂಗಡಿಗೆ ನುಗ್ಗಿದೆ. ಈ ಘಟನೆ ನಿನ್ನೆ ನಡೆದಿದೆ.</p>
