<p>ಹುಬ್ಬಳ್ಳಿ(ಧಾರವಾಡ): "ಬಿಹಾರ ಚುನಾವಣೆಯಲ್ಲಿ ಬಿಜೆಪಿ ಮೋಸದಿಂದ ಗೆದ್ದಿದೆ. ಮೋಸದಿಂದ ಚುನಾವಣೆ ಗೆದ್ದ ಪ್ರಧಾನಿಯನ್ನು ನಾನು ಎಲ್ಲೂ ನೋಡೇ ಇಲ್ಲ" ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಟೀಕಿಸಿದರು.</p><p>ನಗರದಲ್ಲಿಂದು ಮಾತನಾಡಿದ ಅವರು, "ದೇಶದಲ್ಲಿ ಬಾಂಬ್ ಸ್ಫೋಟಗೊಂಡಾಗ ಪ್ರಧಾನಿ ಮೋದಿ ಭೂತಾನ್ ರಾಜನ ಹುಟ್ಟುಹಬ್ಬದಲ್ಲಿ ಪಾಲ್ಗೊಳ್ಳಲು ಹೋಗಿದ್ದರು. ಬಾಂಬ್ ಸ್ಫೋಟವಾದಾಗ ಅವರು ವಾಪಸ್ ಬರಬಹುದಿತ್ತು" ಎಂದರು.</p><p>"ಇಡೀ ದೇಶದಲ್ಲಿ ಬಡವನಿಗೆ ಭೂಮಿ ಕೊಟ್ಟದ್ದು ಇಂದಿರಾ ಗಾಂಧಿ. ಪಾಕಿಸ್ತಾನ ವಿಭಾಗ ಮಾಡಿ ಬಾಂಗ್ಲಾದೇಶ ಮಾಡಿದ್ದು ಇಂದಿರಾ ಗಾಂಧಿ. ಅವರನ್ನು ಅಟಲ್ ಬಿಹಾರಿ ವಾಜಪೇಯಿ ಐರನ್ ಲೇಡಿ ಎಂದು ಕರೆದಿದ್ದಾರೆ" ಎಂದು ಇದೇ ವೇಳೆ ಹೇಳಿದರು.</p><p>ರಾಜ್ಯದಲ್ಲಿ ಅಧಿಕಾರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, "ಈ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ. ನಾನು ಹೆಚ್ಚು ಮಾತನಾಡುವುದಿಲ್ಲ" ಎಂದರು.</p><p>"ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೆಹಲಿಗೆ ಹೋಗಿದ್ದಾರೆ. ಐದು ಪ್ರಮುಖ ಬೇಡಿಕೆಯನ್ನು ಕೇಂದ್ರ ಸರ್ಕಾರದ ಮುಂದಿಡಲಾಗಿದೆ. ಕಾದು ನೋಡೋಣ. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು. ಆದಷ್ಟು ಸಮಸ್ಯೆಗಳಿಗೆ ಪರಿಹಾರ ಕಂಡಿಕೊಳ್ಳಬೇಕು" ಎಂದು ತಿಳಿಸಿದರು.</p><p>ಇದನ್ನೂ ಓದಿ: ಬಿಳಿಮಲೆಯವರು ಹೇಳಿದ್ದು ತಪ್ಪು, ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ: ತಲ್ಲೂರು ಶಿವರಾಮ ಶೆಟ್ಟಿ</a> </p>
