Surprise Me!

ಡಿ.ಕೆ‌.ಶಿವಕುಮಾರ್ ಸಿಎಂ ಆಗಬೇಕೆಂದು ಪ್ರಾರ್ಥಿಸಿ ಶಬರಿಮಲೆಗೆ ಪಾದಯಾತ್ರೆ

2025-11-20 12 Dailymotion

<p>ರಾಮನಗರ: ಡಿಸಿಎಂ ಡಿ.ಕೆ‌.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದು ಪ್ರಾರ್ಥಿಸಿ ಚನ್ನಪಟ್ಟಣ ತಾಲೂಕಿನ ಹನಿಯೂರು ಗ್ರಾಮದ ಕಾಂಗ್ರೆಸ್ ಯುವ ಮುಖಂಡರು ಶಬರಿಮಲೆ ಅಯ್ಯಪ್ಪಸ್ವಾಮಿ ಮಾಲೆ ಧರಿಸಿ, ವಿಶೇಷ ಪಾದಯಾತ್ರೆ ಕೈಗೊಂಡಿದ್ದಾರೆ.</p><p>ರಾಜ್ಯದಲ್ಲಿ ಸಿಎಂ ಬದಲಾವಣೆ, ಅಧಿಕಾರ ಹಸ್ತಾಂತರ ವಿಚಾರವು ಆಗಾಗ್ಗೆ ಕೇಳಿ ಬರುತ್ತಿದೆ. ಅಲ್ಲಲ್ಲಿ, ಮುಂದಿನ ಸಿಎಂ ಡಿ.ಕೆ.ಶಿವಕುಮಾರ್ ಎಂಬ ಘೋಷಣೆ ಕೂಗಿದ ಘಟನೆಗಳೂ ನಡೆದಿವೆ. ಈ ನಡುವೆ ಕಾಂಗ್ರೆಸ್ ಮುಖಂಡರು ಡಿಸಿಎಂ ಡಿ.ಕೆ‌.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ಪೋಸ್ಟರ್​ ಹಿಡಿದು ಪಾದಯಾತ್ರೆ ಹೋಗುವ ಮೂಲಕ ಗಮನ ಸೆಳೆದಿದ್ದಾರೆ.</p><p>ಬೆಂಗಳೂರು ದಕ್ಷಿಣ ಜಿಲ್ಲೆಯ ಕಾಂಗ್ರೆಸ್ ಯುವ ಮುಖಂಡರಾದ ಹನಿಯೂರು ಗ್ರಾಮದ ಕಾಂತರಾಜ್ ಅವರ ಅಭಿಮಾನಿ ಬಳಗದವರು ಶಬರಿಮಲೆ ಯಾತ್ರೆಗೆ ಹೊರಟಿದ್ದಾರೆ. ಈ ಸಂದರ್ಭದಲ್ಲಿ ತಮ್ಮ‌ ನಾಯಕರಾದ ಡಿ.ಕೆ‌.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂದು ಅಯ್ಯಪ್ಪಸ್ವಾಮಿಗೆ ವಿಶೇಷ ಪಾರ್ಥನೆ ಸಲ್ಲಿಸಲು ಮುಂದಾಗಿದ್ದಾರೆ.</p><p>ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕುಮಾರ್ ಅವರ ಪಾತ್ರ ತುಂಬಾ ದೊಡ್ಡದಿದೆ. ಕಾಂಗ್ರೆಸ್ ಪಕ್ಷದ ಯಶಸ್ಸಿಗಾಗಿ ಅವರು ನಿರಂತರ ಶ್ರಮ ವಹಿಸಿದ್ದಾರೆ. 2028ರಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುತ್ತಾರೆ ಎಂಬ ನಂಬಿಕೆ ನಮಗಿದೆ. ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್​ ಹೈಕಮಾಂಡ್ ಅವರನ್ನು​ ಮುಖ್ಯಮಂತ್ರಿಗಳನ್ನಾಗಿ ಮಾಡಬೇಕು. ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಹನಿಯೂರು ಗ್ರಾಮದ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ. </p><p>ಇದನ್ನೂ ಓದಿ: ವೈರಸ್​ ಭೀತಿ: ಶಬರಿಮಲೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ</a></p>

Buy Now on CodeCanyon