<p>ಬೆಂಗಳೂರು(ಆನೇಕಲ್): ಜಿಗಣಿಯ ಕೈಗಾರಿಕಾ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಮದ್ಯದ ಬಾಟಲಿಗಳ ಸ್ಟಿಕ್ಕರ್ ಹಾಲೋಗ್ರಾಮ್, ಲೇಬಲ್ ತಯಾರಿಸುವ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಜ್ಯೂಪಿಟರ್ ಎಂಬ ಕಾರ್ಖಾನೆ ಬೆಂಕಿ ಅನಾಹುತಕ್ಕೆ ತುತ್ತಾಗಿದೆ. ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ.</p><p>ಕಾರ್ಖಾನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ವಿಷಯ ತಿಳಿದು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದರು. ಸ್ಥಳೀಯ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಎಸ್ಡಿಆರ್ಎಫ್ ಪಡೆ ಅಗ್ನಿಶಾಮಕದಳದ ಸಿಬ್ಬಂದಿಯೊಡನೆ ಕಾರ್ಯಾಚರಣೆಯಲ್ಲಿ ಕೈ ಜೋಡಿಸಿ, ಹೆಚ್ಚಿನ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕೈಗೊಂಡರು. </p><p>ವಿದ್ಯುತ್ ಶಾರ್ಟ್ ಸರ್ಕ್ಯುಟ್ ಶಂಕೆ: ಸತತ ನಾಲ್ಕು ತಾಸುಗಳವರೆಗೆ ಸಿಬ್ಬಂದಿ ಶ್ರಮಿಸಿದ್ದು, ಬೆಂಕಿ ಅಕ್ಕಪಕ್ಕದ ಕಟ್ಟಡಗಳಿಗೆ ವ್ಯಾಪಿಸದಂತೆ ನೋಡಿಕೊಂಡಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ. ಮೇಲ್ನೋಟಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಕಾರಣವಿರಬಹುದೆಂದು ಅಧಿಕಾರಿಗಳು ಶಂಕಿಸಿದ್ದಾರೆ.</p><p>ಇದನ್ನೂ ಓದಿ: ಆನೇಕಲ್ನಲ್ಲಿ ಹೊತ್ತಿ ಉರಿದ ವೇಸ್ಟ್ ಆಯಿಲ್ ಕಂಪನಿ: ಬೆಂಕಿ ನಂದಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ - WASTE OIL COMPANY BURNED</a></p>
