<p>ಮೈಸೂರು: ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರುಕಲಾದ ಘಟನೆ ನಂಜನಗೂಡಿನ ಹೊಸಹಳ್ಳಿ ಗ್ರಾಮದ ಗೇಟ್ ಬಳಿ ನಡೆದಿದೆ. ಬಸ್ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p><p>ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಸುಟ್ಟ ಬಸ್ : ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ KL-15, A- 2444 ನೋಂದಣಿ ಸಂಖ್ಯೆ ಬಸ್ನಲ್ಲಿ ಮಧ್ಯರಾತ್ರಿ ಸರಿಸುಮಾರು 3 ಗಂಟೆಯ ವೇಳೆ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೆತ್ತ ಚಾಲಕ ಹೊಸಹಳ್ಳಿ ಗೇಟ್ ಬಳಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಬಸ್ನಿಂದ ಕೆಳಗಿಳಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಬಾರಿ ಪ್ರಮಾಣದ ಬೆಂಕಿ ವ್ಯಾಪಿಸಿ, ಅಗ್ನಿಶಾಮಕ ಸಿಬ್ಬಂದಿಗಳ ಆಗಮನಕ್ಕೂ ಮುನ್ನವೇ ಬಸ್ ಸುಟ್ಟು ಕರಕಲಾಗಿದೆ. </p><p>ಪ್ರಯಾಣಿಕರಿಗೆ ಪರ್ಯಾಯ ಬಸ್ನ ವ್ಯವಸ್ಥೆ: ಕೇರಳ ರಾಜ್ಯಕ್ಕೆ ಸೇರಿದ ಸಾರಿಗೆ ಬಸ್ ಇದಾಗಿದ್ದು, ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರಿಗೆ ಪರ್ಯಾಯ ಬಸ್ ವ್ಯವಸ್ಥೆ ಮಾಡಿದ್ದಾರೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.</p><p>ಇದನ್ನೂ ಓದಿ: ಜಿಗಣಿಯ ಮದ್ಯದ ಬಾಟಲಿ ಲೇಬಲ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ವಿಡಿಯೋ</a></p>
