<p>ಬಳ್ಳಾರಿ: ಕಂಪ್ಲಿ ತಾಲೂಕಿನ ದೇವಲಾಪುರ ಕಣಿವೆ ಮಾರಮ್ಮ ದೇವಸ್ಥಾನ ಬಳಿಯ ರಾಜ್ಯ ಹೆದ್ದಾರಿ-29ರಲ್ಲಿ ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿ ಪಾಮ್ ಆಯಿಲ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಇದರಿಂದ ಅಪಾರ ಪ್ರಮಾಣದಲ್ಲಿ ಎಣ್ಣೆ ಸೋರಿಕೆ ಆಗಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p><p>ಸೋರಿಕೆಯಾದ ಆಯಿಲ್ ಸಂಗ್ರಹಕ್ಕೆ ಮುಗಿಬಿದ್ದ ಜನ: ಹೆದ್ದಾರಿ ಪಕ್ಕಕ್ಕೆ ಲಾರಿ ಉರುಳಿಬಿದ್ದು, ಟ್ಯಾಂಕರ್ ಮೂಲಕ ಆಯಿಲ್ ಸೋರಿಕೆಯಾಗುತ್ತಿದೆ ಎಂಬ ವಿಷಯ ಸುತ್ತಮುತ್ತಲಿನ ಹಳ್ಳಿಗಳಿಗೆ ವ್ಯಾಪಿಸುತ್ತಿದ್ದಂತೆ ಸ್ಥಳೀಯ ಜನರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಬಕೆಟ್, ಪ್ಲಾಸ್ಟಿಕ್ ಬಿಂದಿಗೆ, ಕ್ಯಾನ್ಗಳು ಮತ್ತು ವಿವಿಧ ಪಾತ್ರೆಗಳೊಂದಿಗೆ ಬಂದು ಆಯಿಲ್ ತುಂಬಿಕೊಳ್ಳಲು ಮುಗಿಬಿದ್ದರು.</p><p>ಎದುರಿಗೆ ಬರುತ್ತಿದ್ದ ಬೈಕ್ಗಳಿಗೆ ದಾರಿ ಮಾಡಿಕೊಡುವ ಭರದಲ್ಲಿ ಅಪಘಾತ: ಪ್ರಾಥಮಿಕ ಮಾಹಿತಿಯಂತೆ ಟ್ಯಾಂಕರ್ ಲಾರಿ ಬೆಂಗಳೂರಿನಿಂದ ಗಂಗಾವತಿಗೆ ತೆರಳುತ್ತಿತ್ತು. ಎದುರಿಗೆ ಬರುತ್ತಿದ್ದ ಬೈಕ್ಗಳಿಗೆ ದಾರಿ ಮಾಡಿಕೊಡುವ ಭರದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಲಾರಿ ಪಲ್ಟಿಯಾದ ರಭಸಕ್ಕೆ ಟ್ಯಾಂಕರ್ಗೆ ಹಾನಿಯಾಗಿದ್ದು, ಅದರೊಳಗಿದ್ದ ಪಾಮ್ ಆಯಿಲ್ ಸೋರಿಕೆಯಾಗಿದೆ.</p><p>ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.</p><p>ಇದನ್ನೂ ಓದಿ: ಕೆಎಸ್ಆರ್ಟಿಸಿ ಬಸ್-ಬೈಕ್ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು</a></p>
