<p>ಹುಬ್ಬಳ್ಳಿ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ 25 ಟನ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಸಹಾಯಕ ನಿರ್ದೇಶಕ ಕೆ. ಆರ್. ರಾಯ್ಕರ್, ಆಹಾರ ನಿರೀಕ್ಷಕರಾದ ವಿಜಯಕುಮಾರ್ ಪತ್ತಾರ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು. </p><p>ಬಂಕಾಪುರದಿಂದ ಕರಾಡಕ್ಕೆ ಸಾಗಿಸುತ್ತಿದ್ದಾಗ ಅಧಿಕಾರಿಗಳು ವಾಹನ ತಡೆದು ಪರಿಶೀಲನೆ ನಡೆಸಿದ್ದಾರೆ. ಇಕ್ಬಾಲ್ ಮದಾರ್ (54) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. </p><p>ಆಹಾರ ನಿರೀಕ್ಷಕ ಶಿವಪ್ಪ ಹೊನ್ನಳ್ಳಿ ಅವರ ದೂರಿನ ಮೇರೆಗೆ ಹಳೇ ಹುಬ್ಬಳ್ಳಿ ಪೊಲೀಸರು ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ, ಬಂಕಾಪುರದ ಕೆಲವು ಪ್ರಮುಖ ಕಿಂಗ್ಪಿನ್ಗಳು ಈ ಅಕ್ರಮ ಅಕ್ಕಿ ಸಾಗಾಟದ ಹಿಂದೆ ಇರುವ ಶಂಕೆ ವ್ಯಕ್ತವಾಗಿದೆ. ಅಕ್ರಮ ಜಾಲದ ಇತರ ಸದಸ್ಯರನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. </p><p>ಸರ್ಕಾರ ಬಡವರ ಹಸಿವು ನಿವಾರಣೆ ಮಾಡುವ ಉದ್ದೇಶದಿಂದ ಜಾರಿಗೆ ತಂದಿರುವ ಪಡಿತರ ವಿತರಣಾ ಯೋಜನೆಯ ಅಕ್ಕಿಯನ್ನು ದುರುಪಯೋಗಪಡಿಸಿಕೊಳ್ಳುವುದು ಗಂಭೀರ ಅಪರಾಧವಾಗಿದ್ದು, ಈ ರೀತಿಯ ಅಕ್ರಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಇದನ್ನೂ ಓದಿ : ಬಳ್ಳಾರಿ ಮಾಡೆಲ್ ಹೌಸ್ ಬೆಂಕಿ ಅವಘಡ: 8 ಮಂದಿ ವಶಕ್ಕೆ</a></p>
