Surprise Me!

ಮಾಘ ಹುಣ್ಣಿಮೆ: ಶ್ರೀ ನಂಜುಂಡೇಶ್ವರನ ದರ್ಶನಕ್ಕೆ ಹರಿದುಬಂತು ಭಕ್ತ ಸಾಗರ

2026-02-02 4 Dailymotion

<p>ಮೈಸೂರು: ಮಾಘ ಹುಣ್ಣಿಮೆಗೆ ಇತಿಹಾಸ ಪ್ರಸಿದ್ಧ ದಕ್ಷಿಣದ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಇಂದು ಲಕ್ಷಾಂತರ ಭಕ್ತರು ಆಗಮಿಸಿದ್ದರು.</p><p>ಬೆಳಗ್ಗೆ 4 ಗಂಟೆಗೆ ಭಕ್ತರು ಕಪಿಲಾನದಿಯಲ್ಲಿ ತೀರ್ಥ ಸ್ನಾನ ಮಾಡಿ, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ದೇವಾಲಯದ ಹೊರಭಾಗದಲ್ಲಿ ಧೂಪ, ದೀಪ ಸೇವೆ, ತುಲಾಭಾರ ಹಾಗು ಉರುಳು ಸೇವೆ ಸಲ್ಲಿಸಿ ಹರಕೆ ತೀರಿಸಿದರು.</p><p>ನಂಜುಂಡೇಶ್ವರ ಸ್ವಾಮಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಪಂಚತೀರ್ಥಗಳ ಅಭಿಷೇಕ, ಬಿಲ್ವಾರ್ಚನೆ, ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಶಾಲ್ಯಾನ್ನ ಅರ್ಪಿಸಲಾಯಿತು. ಮಹಾಮಂಗಳಾರತಿಯ ನಂತರ ಭಕ್ತರಿಗೆ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ದಾಸೋಹ ಭವನದಲ್ಲಿ ವಿಶೇಷ ಸಿಹಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು. </p><p>ದೇಶ-ವಿದೇಶಗಳಿಂದಲೂ ಭಕ್ತರು ಆಗಮಿಸಿದ್ದರು. ಹೊರರಾಜ್ಯ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. </p><p>ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಸಂಚಾರ ದಟ್ಟಣೆಯಲ್ಲಿ ಸಿಲುಕಿ ಭಕ್ತರು ಪರದಾಡಿದರು. ಆಂಬ್ಯುಲೆನ್ಸ್​ಗೂ ಟ್ರಾಫಿಕ್ ಜಾಮ್ ಬಿಸಿ ತಟ್ಟಿತು. </p><p>ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚೆಗೆ ಹೆಚ್ಚು ಟ್ರಾಫಿಕ್ ಜಾಮ್ ಕಂಡುಬರುತ್ತಿದ್ದು, ಬಸ್ ನಿಲ್ದಾಣ ಇಲ್ಲದಿರುವುದು ಇದಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಬಸ್ ನಿಲುಗಡೆ ಆಗುತ್ತಿರುವುದರಿಂದ ಟ್ರಾಫಿಕ್ ಜಾಮ್ ಆಗುತ್ತಿದೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. </p><p>ಮಾಘ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಂಜನಗೂಡು ರೈಲ್ವೆ ನಿಲ್ದಾಣ, ಅಂಬೇಡ್ಕರ್ ಖಾಸಗಿ ಬಸ್ ನಿಲ್ದಾಣ, ಹಳೇ ಮತ್ತು ಹೈಟೆಕ್ ಕೆಎಸ್ಆರ್​ಟಿಸಿ ಬಸ್ ನಿಲ್ದಾಣಗಳಲ್ಲಿ ಹೆಚ್ಚು ಜನಸಂದಣಿ ಇತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.</p><p>ಇದನ್ನೂ ನೋಡಿ: ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ಬನದ ಹುಣ್ಣಿಮೆ ಜಾತ್ರೆ ಸಂಭ್ರಮ: ಲಕ್ಷಾಂತರ ಭಕ್ತರ ಸಮಾಗಮ</a></p>

Buy Now on CodeCanyon