Surprise Me!

ವಿಜಯಪುರ: ಸಕ್ಕರೆ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ - ವಿಡಿಯೋ

2026-02-05 6 Dailymotion

<p>ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಹಾವಿನಾಳ ಗ್ರಾಮದ ಬಳಿ ಇರುವ ದತ್ತ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಬಗ್ಯಾಸ್​​ಗೆ ಬೆಂಕಿ ಹೊತ್ತಿಕೊಂಡು ಘಟನೆ ನಡೆದಿದೆ. ಇದರಿಂದ ಕಾರ್ಖಾನೆ ಯಂತ್ರೋಪಕರಣಗಳಿಗೂ ಬೆಂಕಿ ಹೊತ್ತಿಕೊಂಡು ಸುಟ್ಟು ಹೋಗಿವೆ.</p><p>ಬೆಂಕಿ ಹಿನ್ನೆಲೆಯಲ್ಲಿ, ಕಾರ್ಖಾನೆಯಲ್ಲಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಸ್ಥಳದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು. ಅವಘಡದಲ್ಲಿ ಯಾರಿಗೂ ಹಾನಿಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.</p><p>ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅವಘಡದಿಂದ ಉಂಟಾದ ಹಾನಿ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.</p><p>ಪ್ರತ್ಯೇಕ ಘಟನೆ, ಕಾರು ಸರ್ವೀಸ್​ ಸೆಂಟರ್​ಗೆ ಬೆಂಕಿ: ವಿಜಯಪುರ ನಗರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಹೆಚ್.ಎಂ.ಕೆ. ಕಾರು ಸರ್ವೀಸ್ ಸೆಂಟರ್​ನಲ್ಲಿ ಬೆಂಕಿ ಕಾಣಿಸಿಕೊಂಡು ಕಾರುಗಳು ಸುಟ್ಟು ಕರಕಲಾದ ಘಟನೆ ಬುಧವಾರ ಸಂಜೆ ಸಂಭವಿಸಿದೆ.</p><p>ಘಟನೆಯಲ್ಲಿ, ರಿಪೇರಿ ಹಾಗೂ ಸರ್ವೀಸ್​​ಗಾಗಿ ಬಂದಿದ್ದ ಸುಮಾರು 20 ಕಾರುಗಳು ಸುಟ್ಟುಹೋಗಿವೆ. ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಹಾನಿ ಆಗದಂತೆ ತಡೆದಿದ್ದಾರೆ.</p><p>ಘಟನೆಯಿಂದ ಸುತ್ತಮುತ್ತಲು ದಟ್ಟ ಹೊಗೆ ಆವರಿಸಿತ್ತು. ಅದೃಷ್ಟವಶಾತ್ ಸರ್ವೀಸ್ ಸೆಂಟರ್​​ನಲ್ಲಿ ಯಾರೂ ಇರಲಿಲ್ಲ. ಅಂದಾಜು 35 ಲಕ್ಷ ರೂಪಾಯಿ ಬಿಡಿ ಭಾಗಗಳು, ಒಂದು ಕೋಟಿಗೂ ಅಧಿಕ ಬೆಲೆಬಾಳುವ ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಗೋಲಗುಂಬಜ್ ಹಾಗೂ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ.</p><p>ಇದನ್ನೂ ಓದಿ: ನಾಡಿಗೆ ಎಂಟ್ರಿ ಕೊಟ್ಟ ಗಜರಾಜ: ಕಾಡಿಗೆ ಹಿಮ್ಮೆಟ್ಟಿಸಿದ ಅರಣ್ಯ ಇಲಾಖೆ</a></p>

Buy Now on CodeCanyon