<p>ಮಂಗಳೂರು: ಅತಿ ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ಸಂಜೆ 5 ಗಂಟೆಯ ಸುಮಾರಿಗೆ ಉಳ್ಳಾಲ ತಾಲೂಕಿನ ಕಿನ್ಯ ಸಂಕೇಶ ಎಂಬಲ್ಲಿ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. </p><p>ಬೈಕ್ ಡಿಕ್ಕಿಯಾದ ಪರಿಣಾಮ ಕಂಬ ಅರ್ಧ ತುಂಡಾಗಿ ಬಿದ್ದಿದೆ. ಬೈಕ್ ಸವಾರಿ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p><p>ಬೈಕ್ನಲ್ಲಿದ್ದ ವಿದ್ಯಾರ್ಥಿಗಳು ಬಿಜಾಪುರದವರು ಎಂದು ಗುರುತಿಸಲಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಕಂಬ ತುಂಡಾಗಿ ವಿದ್ಯುತ್ ತಂತಿ ರಸ್ತೆಗೆ ಬಿದ್ದಿದೆ. ತಕ್ಷಣ ಜನ ಸೇರಿದರೂ ವಿದ್ಯುತ್ ಸಂಪರ್ಕ ಇದೆಯೆಂಬ ಭಯದಲ್ಲಿ ಹತ್ತಿರ ಹೋಗಲಿಲ್ಲ. ಗಾಯಾಳುಗಳು ರಸ್ತೆಗೆ ಬಿದ್ದು ಒಂದಷ್ಟು ಹೊತ್ತು ನರಳಾಡಿದ್ದಾರೆ. </p><p>ಆದರೆ ಕಂಬ ಉರುಳುತ್ತಲೇ ವಿದ್ಯುತ್ ಲೈನ್ ಕಟ್ ಆಗಿದ್ದರಿಂದ ತೊಂದರೆ ಉಂಟಾಗಿಲ್ಲ. ಪೊಲೀಸರು ಕೇಸ್ ದಾಖಲಿಸಿಲ್ಲ. ಮೆಸ್ಕಾಂ ಇಲಾಖೆಯವರು ಕೇಸ್ ದಾಖಲಿಸಿದ್ದಾರೆ. </p><p>ಇದನ್ನೂ ನೋಡಿ: ಬೆಂಗಳೂರಲ್ಲಿ ರಸ್ತೆ ದಾಟುವಾಗ ಬೈಕ್ ಡಿಕ್ಕಿ, ಖಾಸಗಿ ಬ್ಯಾಂಕ್ ಉದ್ಯೋಗಿ ಸಾವು: ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆ</a></p>
