<p>ಮೈಸೂರು: ಗುಜರಾತ್ನ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಸಂಜೆ ನಡೆಯಲಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳು ದೇವರಿಗೆ ಪ್ರಾರ್ಥನೆ ಪೂಜೆ ಸಲ್ಲಿಸುತ್ತಿದ್ದಾರೆ.</p><p>ಮೈಸೂರಿನಲ್ಲಿ ನೂರೊಂದು ಗಣಪತಿ ದೇವಸ್ಥಾನದ ಮುಂಭಾಗ ಅಭಿಮಾನಿಗಳು ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.</p><p>ಗುಡ್ ಲಕ್ ಇಂಡಿಯಾ, ಬ್ಲಾಕ್ ಕ್ಯಾಪ್ಸ್ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್ ಎಂದು ತಮ್ಮ ಮುಖದ ಮೇಲೆ ತ್ರಿವರ್ಣ ಧ್ವಜದ ಬಣ್ಣ ಹಾಕಿಸಿಕೊಳ್ಳುತ್ತಿದ್ದರು.</p><p>ಫೈನಲ್ನಲ್ಲಿ ನ್ಯೂಜಿಲೆಂಡ್ ಮಣಿಸಿ ಮತ್ತೊಮ್ಮೆ ವಿಶ್ವಕಪ್ ಮುಡಿಗೇರಿಸಿಕೊಳ್ಳುವಂತೆ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.</p><p>ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಉತ್ತಮ ಪ್ರದರ್ಶನ ನೀಡುವ ಮೂಲಕ ಜಯಗಳಿಸಲಿ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಶುಭ ಕೋರಿದರು.</p><p>ಬಳ್ಳಾರಿಯಲ್ಲೂ ಟೀಮ್ ಇಂಡಿಯಾ ಚಾಂಪಿಯನ್ ಆಗಲೆಂದು ಫ್ಯಾನ್ಸ್ ಶುಭ ಹಾರೈಸಿದರು. </p><p>ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ಇದೀಗ ಸತತ 2ನೇ ಬಾರಿಗೆ ಟ್ರೋಫಿ ಮೇಲೆ ಕಣ್ಣಿಟ್ಟಿದೆ.</p><p>ಇದನ್ನೂ ಓದಿ: ಟಿ20 ವಿಶ್ವಕಪ್ ಫೈನಲ್; IND vs NZ ಪಂದ್ಯದಿಂದ ಅಭಿಷೇಕ್ ಶರ್ಮಾ ಔಟ್?</a></p>
