<p>ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮಲ್ಲೇಶ್ವರ ಗುಡ್ಡಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಅರಣ್ಯ ಪ್ರದೇಶ ಹೊತ್ತಿ ಉರಿದಿದೆ. ಆರೇಮಲ್ಲಾಪುರ, ಐರಣಿ ಗ್ರಾಮಗಳ ಬಳಿ ಇರುವ ಬೆಟ್ಟದ ಮಲ್ಲೇಶ್ವರ ಗುಡ್ಡದಲ್ಲಿ ಘಟನೆ ನಡೆದಿದೆ. </p><p>ಈ ಸ್ಥಳವನ್ನು ಜಿಲ್ಲಾಡಳಿತ ಇತ್ತಿಚೆಗಷ್ಟೇ ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಮುಂದಾಗಿತ್ತು. ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ಕೆಲ ತಿಂಗಳ ಹಿಂದಷ್ಟೇ ಈ ಸ್ಥಳವನ್ನು ಆಯ್ಕೆ ಮಾಡಿದ್ದರು.</p><p>ಅರಣ್ಯಧಾಮದಲ್ಲಿ ಜ್ವಾಲೆ ಆವರಿಸಿದೆ. ಸಂಪದ್ಭರಿತ ವನಸ್ಪತಿ ಅಪರೂಪದ ಗಿಡಮೂಲಿಕೆಗಳು, ಕೃಷ್ಣಮೃಗ ಸೇರಿ ಹಲವು ಪ್ರಾಣಿ-ಪಕ್ಷಿಗಳು ಈ ಅರಣ್ಯ ಪ್ರದೇಶದಲ್ಲಿವೆ. </p><p>ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದಾರೆ.</p><p>ಇದನ್ನೂ ಓದಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ಪ್ರದೇಶ ನಾಶ</a></p><p>ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 20ಕ್ಕೂ ಹೆಚ್ಚು ಕಡೆ ಬೆಂಕಿ ಬಿದ್ದಿದ್ದು, ಅಪರೂಪದ ಶೋಲಾ ಹುಲ್ಲುಗಾವಲು, ಸಸ್ಯ ಸಂಪತ್ತು ಸೇರಿದಂತೆ ಅಮೂಲ್ಯ ಔಷಧಿ ಗಿಡಗಳು ಬೆಂಕಿಗಾಹುತಿಯಾಗಿವೆ. ಇಲ್ಲಿಯೂ ಕೂಡ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. </p>
