Surprise Me!

ಬೊಮ್ಮೇನಹಳ್ಳಿಯಲ್ಲಿ 28 ಕಾಡಾನೆಗಳ ಹಿಂಡು: ರಾತ್ರಿ ಸಂಚಾರಕ್ಕೆ ಅರಣ್ಯ ಇಲಾಖೆ ಬ್ರೇಕ್

2026-04-06 2 Dailymotion

<p>ಹಾಸನ: ಬೇಲೂರು ತಾಲೂಕು ಅರೇಹಳಗಳಿ ಹೋಬಳಿಯ ಬೊಮ್ಮೇನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಚಲನವಲನ ಸ್ಥಳೀಯ ನಿವಾಸಿಗಳಲ್ಲಿ ಭಯದ ವಾತಾವರಣವನ್ನು ಉಂಟುಮಾಡಿದೆ.</p><p>ಭಾನುವಾರ ಇಡೀ ರಾತ್ರಿ ಆಹಾರಕ್ಕಾಗಿ ಅಲೆದಾಡಿದ್ದ ಸುಮಾರು 28 ಕಾಡಾನೆಗಳ ಹಿಂಡು ಬೆಳಗ್ಗೆ ಕಾಫಿ ತೋಟದಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದವು. ಈ ಸಂದರ್ಭದಲ್ಲಿ ಗೌರಿ ಕೆರೆಯಲ್ಲಿ ಸಾಕಷ್ಟು ನೀರು ಕುಡಿಯುವುದರ ಮೂಲಕ ದಾಹ ನೀಗಿಸಿಕೊಂಡು ಮತ್ತದೇ ತೋಟಕ್ಕೆ ವಿಶ್ರಾಂತಿಗೆ ತೆರಳಿದವು. ಇನ್ನೊಂದು ಒಂಟಿ ಕಾಡಾನೆಯು ಕಿತ್ತಾವರ ಎಸ್ಟೇಟ್‌ನ ಬಿ ಬ್ಲಾಕ್‌ನಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ.</p><p>ಇಟಿಎಫ್​ ಸಿಬ್ಬಂದಿಗಳು ಕಾಡಾನೆಗಳ ಸಂಚಾರವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸ್ಥಳೀಯ ನಿವಾಸಿಗಳಿಗೆ ಎಚ್ಚರಿಕೆಯಿಂದಿರುವಂತೆ ತಿಳಿಸುತ್ತಿದ್ದಾರೆ. ಜತೆಗೆ ಆನೆಗಳು ಓಡಾಡಬಹುದಾಗಿರುವ ಸ್ಥಳದಲ್ಲಿ ರಾತ್ರಿ ಸಂಚಾರನ್ನು ಮಾಡಬಾರದೆಂದು ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆಯ ಸಂದೇಶ ನೀಡುತ್ತಿದ್ದಾರೆ.</p><p>ಇದನ್ನೂ ಓದಿ: ಚಿಕ್ಕಮಗಳೂರು: ಮುತ್ತೋಡಿ ಅಭಯಾರಣ್ಯದಲ್ಲಿ ದೈತ್ಯಾಕಾರದ ದಂತದ ಆನೆ ಪ್ರತ್ಯಕ್ಷ</a>  </p><p>ಚಿಕ್ಕಮಗಳೂರು ಮುತ್ತೋಡಿ ಅಭಯಾರಣ್ಯದ ಮಧ್ಯೆ ಇರುವ ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಕೆಸವೆ ಬಳಿ ಇರುವ ಅರಣ್ಯ ವಿಶ್ರಾಂತಿ ಗೃಹದ ಬಳಿ ದೈತ್ಯ ದಂತದ ಕಾಡಾನೆಯೊಂದು ಪದೇ ಪದೇ ಕಾಣಿಸಿಕೊಳ್ಳುತ್ತಿದೆ. ಈ ಆನೆ ಕಂಡ ಜನತೆ ಅದರ ಗಾತ್ರ ನೋಡಿಯೇ ಬೆಚ್ಚಿಬಿದ್ದಿದ್ದಾರೆ.</p>

Buy Now on CodeCanyon