Surprise Me!

ದಕ್ಷಿಣ ಕನ್ನಡ: ಕಡಬ ತಾಲೂಕಿನಲ್ಲಿ ಕಾಡಾನೆಗಳ ಹಿಂಡು ಪತ್ತೆ, ಸಾರ್ವಜನಿಕರಿಗೆ ಎಚ್ಚರಿಕೆ

2026-04-11 123 Dailymotion

<p>ದಕ್ಷಿಣ ಕನ್ನಡ: ಕಡಬ ತಾಲೂಕಿನ ಕೋಡಿಂಬಾಳ ಪ್ರದೇಶದ ಕೋರಿಯರ್ ಎಂಬಲ್ಲಿ ಮತ್ತು 102 ನೆಕ್ಕಿಲಾಡಿ ಸಮೀಪದಲ್ಲಿರುವ ಕುಮಾರಧಾರಾ ನದಿ ತೀರದಲ್ಲಿ ಕಾಡಾನೆಗಳ ಹಿಂಡು ಇಂದು ಬೆಳಗ್ಗೆ ಕಾಣಿಸಿಕೊಂಡಿದೆ.</p><p>ಒಟ್ಟು 8 ಕಾಡಾನೆಗಳು ಗುಂಪಾಗಿ ಸಂಚರಿಸುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ನಿಶೀತ್ ಮಾಹಿಪ್ಪಾಜೆ, ಹರೀಶ್ ಕೋರಿಯರ್ ಎಂಬವವರು ಸೇರಿದಂತೇ ಹಲವರ ಕೃಷಿ ತೋಟಗಳಲ್ಲಿನ ಅಡಿಕೆ, ತೆಂಗು, ಬಾಳೆ ಗಿಡಗಳನ್ನು ಕಾಡಾನೆಗಳು ನಾಶಪಡಿಸಿವೆ. ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸಂಚಾರಿಗಳಲ್ಲಿ ಆತಂಕ ಉಂಟಾಗುತ್ತಿದ್ದಂತೆ, ವಿಷಯ ತಿಳಿದ ತಕ್ಷಣ ಸುಬ್ರಹ್ಮಣ್ಯ ಹಾಗೂ ಪಂಜ ವಲಯದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬಂದೋಬಸ್ತ್ ಕೈಗೊಂಡಿದ್ದಾರೆ. </p><p>ಕಾಡಾನೆಗಳ ಚಲನವಲನವನ್ನು ಗಮನಿಸುತ್ತಾ, ಅವುಗಳನ್ನು ಅರಣ್ಯದತ್ತ ಸುರಕ್ಷಿತವಾಗಿ ಹಿಮ್ಮೆಟ್ಟಿಸುವ ಕಾರ್ಯಾಚರಣೆ ಮುಂದುವರಿದಿದೆ.<br>ಅರಣ್ಯ ಅಧಿಕಾರಿಗಳ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಕಾಡಾನೆಗಳು ಜನವಸತಿ ಪ್ರದೇಶಗಳಿಗೆ ಬರುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. </p><p>ಇದರಿಂದಾಗಿ ಗ್ರಾಮೀಣ ಭಾಗದ ಜನರು ಹೆಚ್ಚಿನ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ. ಸಾರ್ವಜನಿಕರಿಗೆ ಸೂಚನೆ ನೀಡಿರುವ ಅರಣ್ಯ ಇಲಾಖೆ, ಕಾಡಾನೆಗಳ ಹತ್ತಿರ ಹೋಗಬಾರದು, ಫೋಟೋ ಅಥವಾ ವಿಡಿಯೋ ತೆಗೆದುಕೊಳ್ಳಲು ಯತ್ನಿಸಬಾರದು ಹಾಗೂ ರಾತ್ರಿ ಸಮಯದಲ್ಲಿ ಹೊರಗೆ ಅನಾವಶ್ಯಕ ಸಂಚಾರವನ್ನು ತಪ್ಪಿಸಿಕೊಳ್ಳಬೇಕು ಎಂದು ಮನವಿ ಮಾಡಿದೆ. ಯಾವುದೇ ಅನಾಹುತ ಸಂಭವಿಸಿದರೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.</p><p>ಸ್ಥಳದಲ್ಲಿ ಇನ್ನೂ ಅರಣ್ಯ ಸಿಬ್ಬಂದಿ ನಿಯೋಜನೆಗೊಂಡಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಪಂಜ ವಲಯ ಅರಣ್ಯಾಧಿಕಾರಿ ಉಮೇಶ್ ಅವರು ತಿಳಿಸಿದ್ದಾರೆ.</p><p>ಇದನ್ನೂ ಓದಿ: ಆನೇಕಲ್​​​ ಸುತ್ತಮುತ್ತ ಕಾಡಾನೆಗಳು ಪ್ರತ್ಯಕ್ಷ: ಪೊದೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಗಜಪಡೆ</a></p>

Buy Now on CodeCanyon