Surprise Me!

ತುಮಕೂರು: ಅಡ್ಡ ಬಂದ ವೃದ್ಧ, ತಪ್ಪಿಸಲು ಯತ್ನಿಸಿ ಕಾರು ಹಳ್ಳಕ್ಕೆ ಪಲ್ಟಿ - CAR OVERTURNS

2026-04-13 0 Dailymotion

<p>ತುಮಕೂರು: ಅಡ್ಡ ಬಂದ ವೃದ್ಧನನ್ನು ತಪ್ಪಿಸಲು ಯತ್ನಿಸಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಪಲ್ಟಿಯಾದ ಘಟನೆ ಭಾನುವಾರ ನಗರದ ಹೊರವಲಯದ ಹನುಮಂತಪುರದಲ್ಲಿನ ಸಿಟ್ರಿಯಾ ಹೋಟೆಲ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.</p><p>ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಒಂದೇ ಕುಟುಂಬದ ಲೋಕೇಶ್, ಪತ್ನಿ ಹಾಗೂ ಇಬ್ಬರು ಮಕ್ಕಳು ಕಾರಿನಲ್ಲಿ ಶಿರಡಿಗೆ ತೆರಳುತ್ತಿದ್ದರು. ಹನುಮಂತಪುರದ ಬಳಿ ಹೆದ್ದಾರಿಯಲ್ಲಿ ತೆರಳುವಾಗ ರಸ್ತೆ ದಾಟುವ ಭರದಲ್ಲಿ ಕಾರಿಗೆೆ ಅಡ್ಡ ಬಂದ ವೃದ್ಧನನ್ನು ಪಾರು ಮಾಡಲು ಯತ್ನಿಸಿದಾಗ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿದ ಕಾರು ಹಳ್ಳಕ್ಕೆ ಬಿದ್ದಿದೆ. ತುಮಕೂರು ನಗರದ ಪೂರ್ವ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಪ್ರತ್ಯೇಕ ಘಟನೆ: ಮುಂದೆ ಹೋಗುತ್ತಿದ್ದ ಕಂಟೈನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಶೆಟ್ಟಿಗೆರೆ ಕ್ರಾಸ್ ಬಳಿ ಇತ್ತೀಚೆಗೆ ಸಂಭವಿಸಿತ್ತು.    </p><p>ರಕ್ಷಿತಾ ರೆಡ್ಡಿ (23) ಹಾಗೂ ಪವನ್ ರೆಡ್ಡಿ (30) ಮೃತಪಟ್ಟವರು. ರಾಜಶೇಖರ್ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದರು. ಬಳ್ಳಾರಿ ತಾಲೂಕಿನ ಜೋಳದ ರಾಶಿ ಗ್ರಾಮದ ರಾಜಶೇಖರ್ ರೆಡ್ಡಿ ಮತ್ತು ರಕ್ಷಿತಾ ರೆಡ್ಡಿ ಕಳೆದ 5 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. </p><p>ಇದನ್ನೂ ಓದಿ: ಬಸ್ - ಪಿಕ್​ಅಪ್ ಟ್ರಕ್ ಮಧ್ಯೆ ಡಿಕ್ಕಿ: 10 ಜನ ಸ್ಥಳದಲ್ಲೇ ಸಾವು, ಹಲವರ ಸ್ಥಿತಿ ಗಂಭೀರ</a></p>

Buy Now on CodeCanyon