<p>ಮೈಸೂರು: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಬಳಿಕ ಎರಡೂ ವಾಹನಗಳು ಹೊತ್ತಿ ಉರಿದ ಘಟನೆ ಮೈಸೂರು ತಾಲೂಕಿನ ಸಾಗರಕಟ್ಟೆ ಸೇತುವೆ ಬಳಿ ಕಳೆದ ರಾತ್ರಿ ನಡೆದಿದೆ.</p><p>ತಾಲೂಕಿನ ಇಲವಾಲ ಹೋಬಳಿ ವ್ಯಾಪ್ತಿಯ ಸಾಗರಕಟ್ಟೆ ಸೇತುವೆ ಬಳಿ ಕೆ.ಆರ್.ನಗರ ಕಡೆಯಿಂದ ಬಂದ ಕಾರು ಮತ್ತು ಹೊಸಕೋಟೆ ಕಡೆಯಿಂದ ಬಂದ ಬೈಕ್ಗೂ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಸುಟ್ಟು ಕರಕಲಾಗಿವೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇಲವಾಲ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.</p><p>ಈಟಿವಿ ಭಾರತದ ಜೊತೆ ದೂರವಾಣಿಯಲ್ಲಿ ಮಾತನಾಡಿದ ಇನ್ಸ್ಪೆಕ್ಟರ್ ಮಹೇಶ್ ಕುಮಾರ್, "ಕಾರು ಹಾಗೂ ಬೈಕ್ ಡಿಕ್ಕಿಯಿಂದ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ. ಇಬ್ಬರು ಬೈಕ್ ಸವಾರರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದರು ಸುರಕ್ಷಿತವಾಗಿದ್ದಾರೆ. ಬೈಕ್ ಹಾಗೂ ಕಾರಿನಲ್ಲಿದ್ದವರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ" ಎಂದು ತಿಳಿಸಿದರು.</p><p>ಇವುಗಳನ್ನೂ ಓದಿ:</p><ul><li>ಬೆಂಗಳೂರಿಂದ ಶಿವಮೊಗ್ಗಕ್ಕೆ ಹೊರಟ KSRTC ಬಸ್ ಬೆಂಕಿಗಾಹುತಿ: ಪ್ರಯಾಣಿಕರು ಪಾರು</a></li><li>ಬಳ್ಳಾರಿ: ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ; ಯುವಕ ಸಾವು</a></li></ul>
