<p>ಚಿಕ್ಕಮಗಳೂರು: ಮನೆ ಮುಂದೆ ನಿಲ್ಲಿಸಿದ್ದ ಮಾರುತಿ 800 ಕಾರು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಗುಬ್ಬಿಗಾ ಗ್ರಾಮದಲ್ಲಿ ನಡೆಯಿತು.</p><p>ಜಿಕ್ಕಿ ಎಂಬವರ ತೋಟದಲ್ಲಿ ಕೆಲಸ ಮಾಡುವ ಜೀಜೊ ಎಂಬವರ ಕಾರು ಸಂಪೂರ್ಣ ಸುಟ್ಟು ಹೋಗಿದೆ. ವಿದ್ಯುತ್ ಪೂರೈಕೆ ಇಲ್ಲದ ಕಾರಣ ಬೆಂಕಿ ನಂದಿಸಲು ಸಾಧ್ಯವಾಗಲಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p><p>ಎನ್.ಆರ್.ಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಈಟಿವಿ ಭಾರತಕ್ಕೆ ಪ್ರತಿಕ್ರಿಯಿಸಿ, "ಮಾಲೀಕ ಕಾರನ್ನು ಗೇಟ್ನಿಂದ ಹೊರ ಭಾಗದಲ್ಲಿ ನಿಲ್ಲಿಸಿ, ಮತ್ತೆ ಗೇಟ್ ಹಾಕಲು ಹೋದಾಗ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಹಾಗಾಗಿ, ಬೆಂಕಿ ಹೊತ್ತಿಕೊಂಡಿದೆ. ವಿದ್ಯುತ್ ಇಲ್ಲದ ಕಾರಣ ಕಾರನ್ನು ನೀರಿನಿಂದ ನಂದಿಸಲು ಸಾಧ್ಯವಾಗಲಿಲ್ಲ. ಆದರೂ ಸ್ಥಳೀಯರು ಹಾಗೂ ಮಾಲೀಕ ನೀರು ತಂದು ಬೆಂಕಿ ನಂದಿಸಲು ಯತ್ನಿಸಿದ್ದು, ಪ್ರಯೋಜನವಾಗಿಲ್ಲ. ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾರಿನ ಮಾಲೀಕ ಪ್ರಕರಣ ದಾಖಲಿಸಿಲ್ಲ. ಆದರೂ ನಾವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮಾಹಿತಿ ಕಲೆ ಹಾಕಿದ್ದೇವೆ" ಎಂದು ತಿಳಿಸಿದರು.</p><p>ಇವುಗಳನ್ನೂ ಓದಿ:</p><ul><li>ಮೈಸೂರು: ಮುಖಾಮುಖಿ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು-ಬೈಕ್- ವಿಡಿಯೋ</a></li><li>ಬೆಂಗಳೂರಿಂದ ಶಿವಮೊಗ್ಗಕ್ಕೆ ಹೊರಟ KSRTC ಬಸ್ ಬೆಂಕಿಗಾಹುತಿ: ಪ್ರಯಾಣಿಕರು ಪಾರು</a></li></ul>
