<p>ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ವೇಳೆ ಹಿಂಸಾಚಾರ ಮತ್ತು ಅಕ್ರಮಗಳ ಘಟನೆಗಳು ವರದಿಯಾಗಿವೆ. ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭವಾನಿಪುರದಲ್ಲಿ ಟಿಎಂಸಿ ಗೂಂಡಾಗಳು ಮತದಾರರನ್ನು ಹೆದರಿಸಿ ಭದ್ರತಾ ಸಿಬ್ಬಂದಿಯ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಟಿಎಂಸಿಗೆ ಮತ ಹಾಕುವಂತೆ ಬೆದರಿಕೆ ಹಾಕಿದ ಘಟನೆ ಕೂಡ ನಡೆದಿದ್ದು, ಮಹಿಳೆಯೊಬ್ಬರು ಆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಪಕ್ಷ ನಾಯಕ ಸುವೇಂದು ಅಧಿಕಾರಿ ಟಿಎಂಸಿ ಬೆಂಬಲಿಗರನ್ನು ಬೆನ್ನಟ್ಟಿದ ದೃಶ್ಯಗಳು ಸೆರೆಯಾಗಿವೆ. ಇವಿಎಂಗೆ ಟೇಪ್ ಅಳವಡಿಸಿದ ಆರೋಪದ ಮೇಲೆ ಬಿಜೆಪಿ ಮರು ಮತದಾನಕ್ಕೆ ಆಗ್ರಹಿಸಿದ್ದು, ಚುನಾವಣಾ ಅಧಿಕಾರಿಗಳು ಎರಡು ಕ್ಷೇತ್ರಗಳಲ್ಲಿ ಮತದಾನ ಸ್ಥಗಿತಗೊಳಿಸಿದ್ದಾರೆ. ಮಳೆ ಮತ್ತು ಬಿಸಿಲಿನ ನಡುವೆಯೂ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ.</p>
