<p>ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಶಿರಾಲಿ ಮೂಲದ 14 ಮಂದಿ ಕಪ್ಪೆ ಚಿಪ್ಪು ತೆಗೆಯಲು ನದಿಗೆ ಇಳಿದಿದ್ದರು. ಆರಂಭದಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದ ಕಾರಣ ಧೈರ್ಯದಿಂದ ಇಳಿದಿದ್ದರು. ಆದರೆ ಒಂದೇ ಕುಟುಂಬದ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೂವರನ್ನು ರಕ್ಷಿಸಲಾಗಿದ್ದು, ಮಾದೇವಿ ಮತ್ತು ನಾಗರತ್ನಾ ಅವರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಮೃತಪಟ್ಟ 8 ಮಂದಿಯಲ್ಲಿ ಹಲವು ಮಹಿಳೆಯರು ಮತ್ತು ಒಬ್ಬ ಪುರುಷ ಇದ್ದಾರೆ. ಉಳಿದವರ ಶೋಧ ಕಾರ್ಯ ಮುಂದುವರಿದಿದೆ.</p>
