<p>ಬಳ್ಳಾರಿ: ಹೊಸದಾಗಿ ಸಚಿವ ಸಂಪುಟ ಪುನಾರಚನೆಯಾದರೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ನನ್ನ ಹಾಗೂ ಜಿಲ್ಲೆಯ ಶಾಸಕರ ಅಭಿಪ್ರಾಯ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದ್ದಾರೆ.</p><p>ಬಳ್ಳಾರಿಯ ಮಹಾನಗರ ಪಾಲಿಕೆಯಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಸಿಎಂ ಬದಲಾವಣೆ ಬಗ್ಗೆ ನನಗೆ ಮಾಹಿತಿಯಿಲ್ಲ. ಶಾಸಕಾಂಗ ಪಕ್ಷದ ಸಭೆಯ ಬಗ್ಗೆಯೂ ಕರೆ ಬಂದಿಲ್ಲ. ಆದರೆ, ಸಿಎಂ ಬದಲಾವಣೆಗೆ ಸಂಬಂಧಿಸಿದಂತೆ ಹೈಕಮಾಂಡ್ ಸೂಚನೆಯಂತೆ ನಾನು ನಡೆದುಕೊಳ್ಳುತ್ತೇನೆ ಎಂದರು.</p><p>ಸಚಿವ ಸಂಪುಟ ಪುನರ್ರಚನೆ ಅಥವಾ ಸಿಎಂ ಬದಲಾವಣೆ ವಿಷಯದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರ ತೀರ್ಮಾನವೇ ಅಂತಿಮ, ಅವರು ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಹೇಳಿದರು.</p><p>ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಅಯಾಜ್ ಅಹ್ಮದ್, ಸುಬ್ಬರಾಯುಡು, ಮೊಹಮ್ಮದ್ ಭಾಯ್, ಡಿ.ಸೂರಿ, ಬಿಆರೆಲ್ ಸೀನಾ, ಅಲ್ಲಾಬಕಷ್, ಹೊನ್ನಪ್ಪ, ಕಣೇಕಲ್ ಮೆಹಬೂಬಸಾಬ, ಪಾಲಿಕೆಯ ಸದಸ್ಯ ಜಬ್ಬಾರ್ ಮತ್ತಿತರರು ಹಾಜರಿದ್ದರು.</p><p>ಇದನ್ನೂ ನೋಡಿ: ಸಿಎಂ ಹೇಳಿದ ಬಳಿಕವೇ ಎಲ್ಲವೂ ಗೊತ್ತಾಗಲಿದೆ: ಸಚಿವ ಸತೀಶ್ ಜಾರಕಿಹೊಳಿ</a></p>
