Surprise Me!

ರಾಯಚೂರು: ಮನೆಯ ಬೀಗ ಮುರಿದು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ-ಬೆಳ್ಳಿ ಕಳ್ಳತನ

2026-05-28 53 Dailymotion

<p>ರಾಯಚೂರು : ನಗರದ ಕರ್ನಾಟಕ ಸಂಘದ ಬಳಿಯ ಮನೆಯಲ್ಲಿ ಬೀಗ ಮುರಿದು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಕಳ್ಳತನವಾಗಿರುವ ಘಟನೆ ನಡೆದಿದೆ.</p><p>ನರಸಿಂಹಮೂರ್ತಿ ಎಂಬುವರು ತಮ್ಮ ಮಗಳ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಿದ್ದ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಮಯದಲ್ಲಿ ಕಳ್ಳರು ಮನೆಯ ಹಿಂಭಾಗದ ಬಾಗಿಲು ಮುರಿದು ಒಳನುಗ್ಗಿ ಕಳ್ಳತನ ಮಾಡಿದ್ದಾರೆ.</p><p>ಮನೆಯ ಕೋಣೆಯಲ್ಲಿದ್ದ ಸುಮಾರು 21 ತೊಲೆ ಚಿನ್ನ ಸೇರಿದಂತೆ ಕೋಟ್ಯಂತರ ಮೌಲ್ಯದ ಆಭರಣಗಳು ಕಳ್ಳತನವಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ನಿಖರವಾಗಿ ಎಷ್ಟು ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. </p><p>ಗುರುವಾರ ಮುಂಜಾನೆ ಬೆಂಗಳೂರಿನಿಂದ ಮನೆಗೆ ವಾಪಸಾದ ನರಸಿಂಹಮೂರ್ತಿ, ಮನೆಯ ಕೋಣೆಯಲ್ಲಿ ಚೆಲ್ಲಾಪಿಲ್ಲಿಯಾಗಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಆರಂಭಿಸಿದ್ದಾರೆ. </p><p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹರೀಶ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.</p><p>ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, 'ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂಭಾಗದ ಬಾಗಿಲು ಮುರಿದು ಕಳ್ಳತನ ನಡೆಸಲಾಗಿದೆ. ಕಳ್ಳತನವಾದ ಆಭರಣಗಳ ನಿಖರ ಮೌಲ್ಯ ಇನ್ನೂ ತಿಳಿದುಬಂದಿಲ್ಲ. ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಲಾಗಿದೆ' ಎಂದು ಮಾಹಿತಿ ನೀಡಿದರು. ನೇತಾಜಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p><p>ಇದನ್ನೂ ಓದಿ : ಆಭರಣ ತಯಾರಿಸುವ 9 ಮಂದಿ ಸಿಬ್ಬಂದಿಯಿಂದ ಚಿನ್ನ ಕಳ್ಳತನ; ಎಕ್ಸಿಟ್ ಫ್ಯಾನ್ ಮೂಲಕ ಚಿನ್ನ ಹೊರಗೆ ಸಾಗಿಸಿದ ಆರೋಪಿಗಳು ಅಂದರ್​</a></p>

Buy Now on CodeCanyon