<p>ಕೋಲಾರ ತಾಲುಕಿನ ನರ್ಸಾಪ್ರದಲ್ಲಿ ಪತ್ನಿಯ ಮೇಲೆ ಅನುಮಾನ ಪಟ್ಟ ಪತಿ ಗಣೇಶ್ ತನ್ನ ಪತ್ನಿ ಯೋಗಿಣಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಆರೋಪಿ ಗಣೇಶ್ ಸಾವಿನ ನಂತರ ಸತ್ತ ಹೆಣ್ಣಿನ ತಂದೆಗೆ ಫೋನ್ ಮಾಡಿ 'ನಿಮ್ಮ ಮಗಳನ್ನು ಕೊಂದಿದ್ದೇನೆ' ಎಂದು ತಿಳಿಸಿದ್ದಾನೆ. ಇದರಿಂದ ಕೋಪಗೊಂಡ ಸಂತ್ರಸ್ತ ಮಹಿಳೆಯ ಕುಟುಂಬಸ್ಥರು ಆರೋಪಿಯ ಮನೆ ಮುಂದೆ ಶವವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರಕರಣ ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>
