Surprise Me!

ರಾಮಮಂದಿರ ದೇಣಿಗೆ ಹಣ ಕಳವು ಪ್ರಕರಣ; ಮೋದಿ ಮೌನಿ ಬಾಬಾ ಆಗಿದ್ದಾರೆ : ವಿ. ಎಸ್. ಉಗ್ರಪ್ಪ

2026-06-27 3 Dailymotion

<p>ಬಳ್ಳಾರಿ : ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ವಿ. ಎಸ್. ಉಗ್ರಪ್ಪ ಅವರು ಬಿಜೆಪಿ, ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. </p><p>ಬಳ್ಳಾರಿ ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, 'ಶ್ರೀರಾಮ ಮಂದಿರವು ದೇಶದ ಅಸ್ಮಿತೆ ಹಾಗೂ ನಂಬಿಕೆಯ ಪ್ರತೀಕವಾಗಿದೆ. ಅಂತಹ ಪವಿತ್ರ ಸ್ಥಳದಲ್ಲಿ ದೇಣಿಗೆ ಹಣದ ದುರುಪಯೋಗ ಅಥವಾ ಕಳವು ನಡೆದಿರುವ ಆರೋಪಗಳು ಕೇಳಿಬಂದಿರುವುದು ಅತ್ಯಂತ ಗಂಭೀರ ವಿಷಯ' ಎಂದು ಹೇಳಿದರು.</p><p>'ರಾಮನ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ನಾಯಕರು, ರಾಮಮಂದಿರದಲ್ಲಿ ಇಷ್ಟೊಂದು ದೊಡ್ಡ ಹಗರಣದ ಆರೋಪ ಕೇಳಿಬಂದರೂ ಮೌನ ವಹಿಸಿದ್ದಾರೆ. ಮಂದಿರ ನಿರ್ಮಾಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಸಂಗ್ರಹಿಸಲಾಗಿತ್ತು. ಈ ಪ್ರಕರಣದಲ್ಲಿ ಸಂಪತ್ ರಾಯ್, ಮಿಶ್ರಾ ಸೇರಿದಂತೆ ಹಲವರ ಪಾತ್ರದ ಕುರಿತು ಸಮಗ್ರ ತನಿಖೆಯಾಗಬೇಕು' ಎಂದು ಆಗ್ರಹಿಸಿದರು.</p><p>'ಇದು ಶತಮಾನದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿದೆ. ಈ ಘಟನೆಯಿಂದ ದೇಶದ ಸಂಸ್ಕೃತಿ ಹಾಗೂ ವಿಶ್ವದ ಮುಂದೆ ಭಾರತದ ಗೌರವಕ್ಕೆ ಧಕ್ಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕುರಿತು ದೇಶದ ಜನರಿಗೆ ಸ್ಪಷ್ಟನೆ ನೀಡಬೇಕು. ಮೋದಿ ಅವರು ಮೌನಿ ಬಾಬಾ ಆಗಿದ್ದಾರೆ. ಆರ್‌ಎಸ್‌ಎಸ್‌, ಬಿಜೆಪಿ ಹಾಗೂ ವಿಶ್ವ ಹಿಂದೂ ಪರಿಷತ್ ನಾಯಕರು ಏಕೆ ಮೌನವಾಗಿದ್ದಾರೆ?' ಎಂದು ಪ್ರಶ್ನಿಸಿದರು.</p><p>ಇದನ್ನೂ ಓದಿ : ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ</a></p>

Buy Now on CodeCanyon