<p>ಬೆಂಗಳೂರಿನಲ್ಲಿ ಏಳನೇ ತರಗತಿ ವಿದ್ಯಾರ್ಥಿ ಸಮರ್ಥ ಎಂಬ ಬಾಲಕ ಶಿಕ್ಷಕರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಮರ್ಯಾಪ್ಪಣ್ ಪಾಳ್ಯದ ಸೇಂಟ್ ಫಿಲೋಮಿನಾ ಶಾಲೆಯ ವಿದ್ಯಾರ್ಥಿಯಾದ ಸಮರ್ಥನಿಗೆ ಶಿಕ್ಷಕರು ಹೊಡೆದು ಬಾಸುಂಡೆ ಬರಿಸಿದ್ದಾರೆ ಎಂದು ಆರೋಪಿಸಲಾಗಿದೆ. ತರಗತಿಯ ಹೊರಗೆ ಕೂರಿಸಿ ಮಾನಸಿಕ ಹಿಂಸೆ ನೀಡಿದ ಕಾರಣ ಬಾಲಕ ಮನೆಗೆ ಬಂದು ನೇಣು ಹಾಕಿಕೊಳ್ಳಲು ಪ್ರಯತ್ನಿಸಿದ್ದಾನೆ. ಮಗನ ಆರೋಗ್ಯ ಸ್ಥಿತಿ ಕಂಡು ಪೋಷಕರು ಕಣ್ಣೀರಿಡುತ್ತಿದ್ದಾರೆ. ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.</p>
