<p>ರಾಯಚೂರು ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಮಗು ಬಲಿಯಾಗಿದೆ. ಮಲಗಿದ್ದ ಮಗುವನ್ನು ಬೀದಿ ನಾಯಿಗಳು ಮನೆಯೊಳಗೆ ನುಗ್ಗಿ ರಸ್ತೆಗೆ ಎಳೆದೊಯ್ದು ಚಿತ್ರಹಿಂಸೆ ನೀಡಿದ ಪರಿಣಾಮ ಮಗು ಮೃತಪಟ್ಟಿದೆ. ಮಗುವನ್ನು ಮೊದಲು ಸಿಂಧನೂರು ಆಸ್ಪತ್ರೆಗೆ, ನಂತರ ರಿಮ್ಸ್ಗೆ ದಾಖಲಿಸಲಾಯಿತಾದರೂ ಉಳಿಸಲು ಸಾಧ್ಯವಾಗಲಿಲ್ಲ. ಈ ಘಟನೆ ಇಡೀ ಕುಟುಂಬವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ರಾಯಚೂರಿನಲ್ಲಿ ಕೇವಲ ನಗರ ಪ್ರದೇಶದಲ್ಲಿ ಮಾತ್ರವಲ್ಲ, ಗ್ರಾಮೀಣ ಪ್ರದೇಶದಲ್ಲೂ ಬೀದಿ ನಾಯಿಗಳ ಹಾವಳಿ ತೀವ್ರವಾಗಿದ್ದು, ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.</p>
