<p>ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಜನತಾ ಪಾರ್ಟಿಯ ಪ್ರತಿಭಟನೆಗೆ ಬೆಂಬಲ ಹೆಚ್ಚಾಗುತ್ತಿದೆ. ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆಗೆ ಬೆಂಬಲ ಹೆಚ್ಚಾಗುತ್ತಿದ್ದು, ಪಟ್ಟು ಸಡಿಲಿಸುವುದಿಲ್ಲ ಎಂದು CJP ಸ್ಪಷ್ಟವಾಗಿ ಹೇಳಿದೆ. ವಿದ್ಯಾರ್ಥಿಗಳ ಬೆಂಬಲ ಹೆಚ್ಚಾಗುತ್ತಿದ್ದಂತೆ ಸಂಸತ್ ಭವನಕ್ಕೆ ಮುತ್ತಿಗೆ ಹಾಕುವ ಸಾಧ್ಯತೆ ಇರುವುದರಿಂದ ಸಂಸತ್ ಭವನದ ಎಲ್ಲಾ ಗೇಟ್ಗಳನ್ನು ಬಂದ್ ಮಾಡಲಾಗಿದ್ದು, ಹೆಚ್ಚುವರಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.</p>
