<p>ನಿನ್ನೆ ರಾತ್ರಿ ದೆಹಲಿಯ ಜಂತರ್ ಮಂತರ್ ಬಳಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತೀವ್ರ ಘರ್ಷಣೆ ನಡೆಯಿತು. ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ಪೊಲೀಸರ ಮೇಲೆ ದಾಳಿ ಮಾಡಿದರು, ಇದರಲ್ಲಿ 5 ಪೊಲೀಸ್ ಅಧಿಕಾರಿಗಳು ಗಾಯಗೊಂಡರು. ಇಂಟರ್ನೆಟ್ ಸೇವೆಯನ್ನು ಮುನ್ನೆಚ್ಚರಿಕೆಯಾಗಿ ಸ್ಥಗಿತಗೊಳಿಸಲಾಯಿತು. ಮಾಧ್ಯಮಗಳಿಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಕೇವಲ ಒಂದೆರಡು ಮಾಧ್ಯಮ ಸಂಸ್ಥೆಗಳಿಗೆ ಮಾತ್ರ ಅವಕಾಶ ನೀಡಲಾಯಿತು. ಪ್ರತಿಭಟನೆ 33ನೇ ದಿನಕ್ಕೆ ಕಾಲಿಟ್ಟಿದ್ದು, ಬೇಡಿಕೆಗಳನ್ನು ಈಡೇರಿಸಬೇಕೆಂಬ ಒತ್ತಡ ಹೆಚ್ಚುತ್ತಿದೆ ಎಂದು ದೆಹಲಿ ಪ್ರತಿನಿಧಿ ಮಂಜುನಾಥ್ ವರದಿ ಮಾಡಿದ್ದಾರೆ.</p>
