<p>ನೀಟ್ ಅಕ್ರಮ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ ಬೆನ್ನಲ್ಲೇ ಅಮಿಷ್ ಕೂಡ ಟ್ವೀಟ್ ಮಾಡಿದ್ದಾರೆ. ಯುವಕರ ಉಜ್ವಲ ಭವಿಷ್ಯವೇ ಮೋದಿ ಸರ್ಕಾರದ ಆದ್ಯತೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ. ನೀಟ್ ಅಕ್ರಮದ ವಿರುದ್ಧ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಲಾಗುತ್ತಿದೆ. ಪ್ರತಿ ನಿತ್ಯ ನೂರಾರು ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಹೋರಾಟದ ತೀವ್ರತೆ ತಗ್ಗುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ.</p>
